ಜನ ಮನದ ನಾಡಿ ಮಿಡಿತ

Advertisement

ಮಲ್ಪೆ: ನಾಡದೋಣಿ ಮೀನುಗಾರರಿಂದ ಮೀನು ಬೇಟೆ ಶುರು..!

ಉಡುಪಿಯಲ್ಲಿ ನಾಡದೋಣಿ ಮೀನುಗಾರರು ಕಡಲಿಗೆ ಇಳಿದಿದ್ದಾರೆ. ಜೂನ್ ತಿಂಗಳಲ್ಲಿ ಆರಂಭಗೊಳ್ಳಬೇಕಿದ್ದ ನಾಡ ದೋಣಿ ಮೀನುಗಾರಿಕೆ ಹವಾಮಾನ ವೈಪರಿತದಿಂದಾಗಿ ಈ ವರ್ಷ ಎರಡು ವಾರ ತಡವಾಗಿ ಆರಂಭಗೊ0ಡಿದೆ.

ಸಾಮಾನ್ಯವಾಗಿ ವರ್ಷಂಪ್ರತಿ ತಿಂಗಳ ಮಧ್ಯದಲ್ಲಿ ಪ್ರಾರಂಭಗೊಳ್ಳುವುದು ವಾಡಿಕೆ. ಆದರೆ ಈ ವರ್ಷ ಮೇ ತಿಂಗಳಲ್ಲೇ ಮಳೆ ಶುರುವಾಗಿದ್ದರಿಂದ ಮಳೆ ಅಬ್ಬರ ಜೂನ್ ಕೊನೆತನಕ ಮುಂದುವರೆದಿತ್ತು. ಯಾಂತ್ರಿಕೃತ ಮೀನುಗಾರಿಕೆಗೆ ಜೂನ್ ಮತ್ತು ಜುಲೈ ತಿಂಗಳಲ್ಲಿ ನಿಷೇಧ ಇರುತ್ತದೆ. ಈ ಅವಧಿಯಲ್ಲಿ ಸ್ಥಳೀಯವಾಗಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ಮಾಡುವುದು ವಾಡಿಕೆ.

ಅದರಂತೆ ಎರಡು ದಿನಗಳಿಂದ ಮೀನುಗಾರರು ಮೀನು ಬೇಟೆಗೆ ಇಳಿದಿದ್ದಾರೆ. ಇದರಿಂದಾಗಿ ಕಳೆದ ಒಂದು ತಿಂಗಳಿ0ದ ಮೀನು ಇಲ್ಲದೆ ಪರದಾಡಿದ್ದ ಮತ್ಸ್ಯ ಪ್ರಿಯರಿಗೆ ಇನ್ನು ಮುಂದೆ ಮೀನು ಸಿಗಲಿದೆ. ಸ್ಥಳೀಯವಾಗಿ ಬೂತಾಯಿ, ಬಂಗುಡೆ ,ಮುರು ಮೀನು, ನಾಡದೋಣಿ ಮೀನುಗಾರರಿಗೆ ಸಿಕ್ಕಿದೆ. ಅಬ್ಬರದ ಗಾಳಿ ಮಳೆ ನಡುವೆ ನಾಡ ದೋಣಿಗಳಲ್ಲಿ ಮೀನು ಹಿಡಿಯುವುದೇ ಒಂದು ಸಾಹಸ. ಕಡಲ ಮಕ್ಕಳು ನಿಜಕ್ಕೂ ಸಾಹಸಪ್ರಿಯರು. ಈ ವರ್ಷದ ನಾಡದೋಣಿ ಮೀನುಗಾರಿಕೆ ಉತ್ತಮವಾಗಿ ನಡೆಯಲಿ ಎಂಬುದೇ ನಮ್ಮ ಆಶಯ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!