ಜನ ಮನದ ನಾಡಿ ಮಿಡಿತ

Advertisement

ಮಲ್ಪೆ: ನಾಡದೋಣಿ ಮೀನುಗಾರರಿಂದ ಮೀನು ಬೇಟೆ ಶುರು..!

ಉಡುಪಿಯಲ್ಲಿ ನಾಡದೋಣಿ ಮೀನುಗಾರರು ಕಡಲಿಗೆ ಇಳಿದಿದ್ದಾರೆ. ಜೂನ್ ತಿಂಗಳಲ್ಲಿ ಆರಂಭಗೊಳ್ಳಬೇಕಿದ್ದ ನಾಡ ದೋಣಿ ಮೀನುಗಾರಿಕೆ ಹವಾಮಾನ ವೈಪರಿತದಿಂದಾಗಿ ಈ ವರ್ಷ ಎರಡು ವಾರ ತಡವಾಗಿ ಆರಂಭಗೊ0ಡಿದೆ.

ಸಾಮಾನ್ಯವಾಗಿ ವರ್ಷಂಪ್ರತಿ ತಿಂಗಳ ಮಧ್ಯದಲ್ಲಿ ಪ್ರಾರಂಭಗೊಳ್ಳುವುದು ವಾಡಿಕೆ. ಆದರೆ ಈ ವರ್ಷ ಮೇ ತಿಂಗಳಲ್ಲೇ ಮಳೆ ಶುರುವಾಗಿದ್ದರಿಂದ ಮಳೆ ಅಬ್ಬರ ಜೂನ್ ಕೊನೆತನಕ ಮುಂದುವರೆದಿತ್ತು. ಯಾಂತ್ರಿಕೃತ ಮೀನುಗಾರಿಕೆಗೆ ಜೂನ್ ಮತ್ತು ಜುಲೈ ತಿಂಗಳಲ್ಲಿ ನಿಷೇಧ ಇರುತ್ತದೆ. ಈ ಅವಧಿಯಲ್ಲಿ ಸ್ಥಳೀಯವಾಗಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ಮಾಡುವುದು ವಾಡಿಕೆ.

ಅದರಂತೆ ಎರಡು ದಿನಗಳಿಂದ ಮೀನುಗಾರರು ಮೀನು ಬೇಟೆಗೆ ಇಳಿದಿದ್ದಾರೆ. ಇದರಿಂದಾಗಿ ಕಳೆದ ಒಂದು ತಿಂಗಳಿ0ದ ಮೀನು ಇಲ್ಲದೆ ಪರದಾಡಿದ್ದ ಮತ್ಸ್ಯ ಪ್ರಿಯರಿಗೆ ಇನ್ನು ಮುಂದೆ ಮೀನು ಸಿಗಲಿದೆ. ಸ್ಥಳೀಯವಾಗಿ ಬೂತಾಯಿ, ಬಂಗುಡೆ ,ಮುರು ಮೀನು, ನಾಡದೋಣಿ ಮೀನುಗಾರರಿಗೆ ಸಿಕ್ಕಿದೆ. ಅಬ್ಬರದ ಗಾಳಿ ಮಳೆ ನಡುವೆ ನಾಡ ದೋಣಿಗಳಲ್ಲಿ ಮೀನು ಹಿಡಿಯುವುದೇ ಒಂದು ಸಾಹಸ. ಕಡಲ ಮಕ್ಕಳು ನಿಜಕ್ಕೂ ಸಾಹಸಪ್ರಿಯರು. ಈ ವರ್ಷದ ನಾಡದೋಣಿ ಮೀನುಗಾರಿಕೆ ಉತ್ತಮವಾಗಿ ನಡೆಯಲಿ ಎಂಬುದೇ ನಮ್ಮ ಆಶಯ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!