ಉಡುಪಿಯಲ್ಲಿ ನಾಡದೋಣಿ ಮೀನುಗಾರರು ಕಡಲಿಗೆ ಇಳಿದಿದ್ದಾರೆ. ಜೂನ್ ತಿಂಗಳಲ್ಲಿ ಆರಂಭಗೊಳ್ಳಬೇಕಿದ್ದ ನಾಡ ದೋಣಿ ಮೀನುಗಾರಿಕೆ ಹವಾಮಾನ ವೈಪರಿತದಿಂದಾಗಿ ಈ ವರ್ಷ ಎರಡು ವಾರ ತಡವಾಗಿ ಆರಂಭಗೊ0ಡಿದೆ.
ಸಾಮಾನ್ಯವಾಗಿ ವರ್ಷಂಪ್ರತಿ ತಿಂಗಳ ಮಧ್ಯದಲ್ಲಿ ಪ್ರಾರಂಭಗೊಳ್ಳುವುದು ವಾಡಿಕೆ. ಆದರೆ ಈ ವರ್ಷ ಮೇ ತಿಂಗಳಲ್ಲೇ ಮಳೆ ಶುರುವಾಗಿದ್ದರಿಂದ ಮಳೆ ಅಬ್ಬರ ಜೂನ್ ಕೊನೆತನಕ ಮುಂದುವರೆದಿತ್ತು. ಯಾಂತ್ರಿಕೃತ ಮೀನುಗಾರಿಕೆಗೆ ಜೂನ್ ಮತ್ತು ಜುಲೈ ತಿಂಗಳಲ್ಲಿ ನಿಷೇಧ ಇರುತ್ತದೆ. ಈ ಅವಧಿಯಲ್ಲಿ ಸ್ಥಳೀಯವಾಗಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ಮಾಡುವುದು ವಾಡಿಕೆ.
ಅದರಂತೆ ಎರಡು ದಿನಗಳಿಂದ ಮೀನುಗಾರರು ಮೀನು ಬೇಟೆಗೆ ಇಳಿದಿದ್ದಾರೆ. ಇದರಿಂದಾಗಿ ಕಳೆದ ಒಂದು ತಿಂಗಳಿ0ದ ಮೀನು ಇಲ್ಲದೆ ಪರದಾಡಿದ್ದ ಮತ್ಸ್ಯ ಪ್ರಿಯರಿಗೆ ಇನ್ನು ಮುಂದೆ ಮೀನು ಸಿಗಲಿದೆ. ಸ್ಥಳೀಯವಾಗಿ ಬೂತಾಯಿ, ಬಂಗುಡೆ ,ಮುರು ಮೀನು, ನಾಡದೋಣಿ ಮೀನುಗಾರರಿಗೆ ಸಿಕ್ಕಿದೆ. ಅಬ್ಬರದ ಗಾಳಿ ಮಳೆ ನಡುವೆ ನಾಡ ದೋಣಿಗಳಲ್ಲಿ ಮೀನು ಹಿಡಿಯುವುದೇ ಒಂದು ಸಾಹಸ. ಕಡಲ ಮಕ್ಕಳು ನಿಜಕ್ಕೂ ಸಾಹಸಪ್ರಿಯರು. ಈ ವರ್ಷದ ನಾಡದೋಣಿ ಮೀನುಗಾರಿಕೆ ಉತ್ತಮವಾಗಿ ನಡೆಯಲಿ ಎಂಬುದೇ ನಮ್ಮ ಆಶಯ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…