ಉಡುಪಿಯಲ್ಲಿ ನಾಡದೋಣಿ ಮೀನುಗಾರರು ಕಡಲಿಗೆ ಇಳಿದಿದ್ದಾರೆ. ಜೂನ್ ತಿಂಗಳಲ್ಲಿ ಆರಂಭಗೊಳ್ಳಬೇಕಿದ್ದ ನಾಡ ದೋಣಿ ಮೀನುಗಾರಿಕೆ ಹವಾಮಾನ ವೈಪರಿತದಿಂದಾಗಿ ಈ ವರ್ಷ ಎರಡು ವಾರ ತಡವಾಗಿ ಆರಂಭಗೊ0ಡಿದೆ.
ಸಾಮಾನ್ಯವಾಗಿ ವರ್ಷಂಪ್ರತಿ ತಿಂಗಳ ಮಧ್ಯದಲ್ಲಿ ಪ್ರಾರಂಭಗೊಳ್ಳುವುದು ವಾಡಿಕೆ. ಆದರೆ ಈ ವರ್ಷ ಮೇ ತಿಂಗಳಲ್ಲೇ ಮಳೆ ಶುರುವಾಗಿದ್ದರಿಂದ ಮಳೆ ಅಬ್ಬರ ಜೂನ್ ಕೊನೆತನಕ ಮುಂದುವರೆದಿತ್ತು. ಯಾಂತ್ರಿಕೃತ ಮೀನುಗಾರಿಕೆಗೆ ಜೂನ್ ಮತ್ತು ಜುಲೈ ತಿಂಗಳಲ್ಲಿ ನಿಷೇಧ ಇರುತ್ತದೆ. ಈ ಅವಧಿಯಲ್ಲಿ ಸ್ಥಳೀಯವಾಗಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ಮಾಡುವುದು ವಾಡಿಕೆ.
ಅದರಂತೆ ಎರಡು ದಿನಗಳಿಂದ ಮೀನುಗಾರರು ಮೀನು ಬೇಟೆಗೆ ಇಳಿದಿದ್ದಾರೆ. ಇದರಿಂದಾಗಿ ಕಳೆದ ಒಂದು ತಿಂಗಳಿ0ದ ಮೀನು ಇಲ್ಲದೆ ಪರದಾಡಿದ್ದ ಮತ್ಸ್ಯ ಪ್ರಿಯರಿಗೆ ಇನ್ನು ಮುಂದೆ ಮೀನು ಸಿಗಲಿದೆ. ಸ್ಥಳೀಯವಾಗಿ ಬೂತಾಯಿ, ಬಂಗುಡೆ ,ಮುರು ಮೀನು, ನಾಡದೋಣಿ ಮೀನುಗಾರರಿಗೆ ಸಿಕ್ಕಿದೆ. ಅಬ್ಬರದ ಗಾಳಿ ಮಳೆ ನಡುವೆ ನಾಡ ದೋಣಿಗಳಲ್ಲಿ ಮೀನು ಹಿಡಿಯುವುದೇ ಒಂದು ಸಾಹಸ. ಕಡಲ ಮಕ್ಕಳು ನಿಜಕ್ಕೂ ಸಾಹಸಪ್ರಿಯರು. ಈ ವರ್ಷದ ನಾಡದೋಣಿ ಮೀನುಗಾರಿಕೆ ಉತ್ತಮವಾಗಿ ನಡೆಯಲಿ ಎಂಬುದೇ ನಮ್ಮ ಆಶಯ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…