ಉಡುಪಿಯಲ್ಲಿ ನಾಡದೋಣಿ ಮೀನುಗಾರರು ಕಡಲಿಗೆ ಇಳಿದಿದ್ದಾರೆ. ಜೂನ್ ತಿಂಗಳಲ್ಲಿ ಆರಂಭಗೊಳ್ಳಬೇಕಿದ್ದ ನಾಡ ದೋಣಿ ಮೀನುಗಾರಿಕೆ ಹವಾಮಾನ ವೈಪರಿತದಿಂದಾಗಿ ಈ ವರ್ಷ ಎರಡು ವಾರ ತಡವಾಗಿ ಆರಂಭಗೊ0ಡಿದೆ.
ಸಾಮಾನ್ಯವಾಗಿ ವರ್ಷಂಪ್ರತಿ ತಿಂಗಳ ಮಧ್ಯದಲ್ಲಿ ಪ್ರಾರಂಭಗೊಳ್ಳುವುದು ವಾಡಿಕೆ. ಆದರೆ ಈ ವರ್ಷ ಮೇ ತಿಂಗಳಲ್ಲೇ ಮಳೆ ಶುರುವಾಗಿದ್ದರಿಂದ ಮಳೆ ಅಬ್ಬರ ಜೂನ್ ಕೊನೆತನಕ ಮುಂದುವರೆದಿತ್ತು. ಯಾಂತ್ರಿಕೃತ ಮೀನುಗಾರಿಕೆಗೆ ಜೂನ್ ಮತ್ತು ಜುಲೈ ತಿಂಗಳಲ್ಲಿ ನಿಷೇಧ ಇರುತ್ತದೆ. ಈ ಅವಧಿಯಲ್ಲಿ ಸ್ಥಳೀಯವಾಗಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ಮಾಡುವುದು ವಾಡಿಕೆ.
ಅದರಂತೆ ಎರಡು ದಿನಗಳಿಂದ ಮೀನುಗಾರರು ಮೀನು ಬೇಟೆಗೆ ಇಳಿದಿದ್ದಾರೆ. ಇದರಿಂದಾಗಿ ಕಳೆದ ಒಂದು ತಿಂಗಳಿ0ದ ಮೀನು ಇಲ್ಲದೆ ಪರದಾಡಿದ್ದ ಮತ್ಸ್ಯ ಪ್ರಿಯರಿಗೆ ಇನ್ನು ಮುಂದೆ ಮೀನು ಸಿಗಲಿದೆ. ಸ್ಥಳೀಯವಾಗಿ ಬೂತಾಯಿ, ಬಂಗುಡೆ ,ಮುರು ಮೀನು, ನಾಡದೋಣಿ ಮೀನುಗಾರರಿಗೆ ಸಿಕ್ಕಿದೆ. ಅಬ್ಬರದ ಗಾಳಿ ಮಳೆ ನಡುವೆ ನಾಡ ದೋಣಿಗಳಲ್ಲಿ ಮೀನು ಹಿಡಿಯುವುದೇ ಒಂದು ಸಾಹಸ. ಕಡಲ ಮಕ್ಕಳು ನಿಜಕ್ಕೂ ಸಾಹಸಪ್ರಿಯರು. ಈ ವರ್ಷದ ನಾಡದೋಣಿ ಮೀನುಗಾರಿಕೆ ಉತ್ತಮವಾಗಿ ನಡೆಯಲಿ ಎಂಬುದೇ ನಮ್ಮ ಆಶಯ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…