ಉಡುಪಿಯಲ್ಲಿ ನಾಡದೋಣಿ ಮೀನುಗಾರರು ಕಡಲಿಗೆ ಇಳಿದಿದ್ದಾರೆ. ಜೂನ್ ತಿಂಗಳಲ್ಲಿ ಆರಂಭಗೊಳ್ಳಬೇಕಿದ್ದ ನಾಡ ದೋಣಿ ಮೀನುಗಾರಿಕೆ ಹವಾಮಾನ ವೈಪರಿತದಿಂದಾಗಿ ಈ ವರ್ಷ ಎರಡು ವಾರ ತಡವಾಗಿ ಆರಂಭಗೊ0ಡಿದೆ.
ಸಾಮಾನ್ಯವಾಗಿ ವರ್ಷಂಪ್ರತಿ ತಿಂಗಳ ಮಧ್ಯದಲ್ಲಿ ಪ್ರಾರಂಭಗೊಳ್ಳುವುದು ವಾಡಿಕೆ. ಆದರೆ ಈ ವರ್ಷ ಮೇ ತಿಂಗಳಲ್ಲೇ ಮಳೆ ಶುರುವಾಗಿದ್ದರಿಂದ ಮಳೆ ಅಬ್ಬರ ಜೂನ್ ಕೊನೆತನಕ ಮುಂದುವರೆದಿತ್ತು. ಯಾಂತ್ರಿಕೃತ ಮೀನುಗಾರಿಕೆಗೆ ಜೂನ್ ಮತ್ತು ಜುಲೈ ತಿಂಗಳಲ್ಲಿ ನಿಷೇಧ ಇರುತ್ತದೆ. ಈ ಅವಧಿಯಲ್ಲಿ ಸ್ಥಳೀಯವಾಗಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ಮಾಡುವುದು ವಾಡಿಕೆ.
ಅದರಂತೆ ಎರಡು ದಿನಗಳಿಂದ ಮೀನುಗಾರರು ಮೀನು ಬೇಟೆಗೆ ಇಳಿದಿದ್ದಾರೆ. ಇದರಿಂದಾಗಿ ಕಳೆದ ಒಂದು ತಿಂಗಳಿ0ದ ಮೀನು ಇಲ್ಲದೆ ಪರದಾಡಿದ್ದ ಮತ್ಸ್ಯ ಪ್ರಿಯರಿಗೆ ಇನ್ನು ಮುಂದೆ ಮೀನು ಸಿಗಲಿದೆ. ಸ್ಥಳೀಯವಾಗಿ ಬೂತಾಯಿ, ಬಂಗುಡೆ ,ಮುರು ಮೀನು, ನಾಡದೋಣಿ ಮೀನುಗಾರರಿಗೆ ಸಿಕ್ಕಿದೆ. ಅಬ್ಬರದ ಗಾಳಿ ಮಳೆ ನಡುವೆ ನಾಡ ದೋಣಿಗಳಲ್ಲಿ ಮೀನು ಹಿಡಿಯುವುದೇ ಒಂದು ಸಾಹಸ. ಕಡಲ ಮಕ್ಕಳು ನಿಜಕ್ಕೂ ಸಾಹಸಪ್ರಿಯರು. ಈ ವರ್ಷದ ನಾಡದೋಣಿ ಮೀನುಗಾರಿಕೆ ಉತ್ತಮವಾಗಿ ನಡೆಯಲಿ ಎಂಬುದೇ ನಮ್ಮ ಆಶಯ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…