ಹೊಸದಿಲ್ಲಿ : ದೇಶದ ನಾಗರಿಕರು ತೆಗೆದುಕೊಂಡ ಸಾಲ ಮರುಪಾವತಿ ಪ್ರಕ್ರಿಯೆಗೆ ಬಂದಾಗ ಕಠಿಣ ಹಾಗೂ ಬೇಜವಾಬ್ದಾರಿಯುತ ಕ್ರಮಗಳನ್ನು ತೆಗೆದುಕೊಳ್ಳಬಾರದು ಮತ್ತು ಅಂತಹ ಪ್ರಕರಣಗಳನ್ನು ಸೂಕ್ಷ್ಮವಾಗಿ ನಿಭಾಯಿಸಬೇಕು ಎಂದು ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್ಗಳಿಗೆ ಸೂಚನೆ ನೀಡಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿಕೆ ನೀಡಿದ್ದಾರೆ.ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಸಣ್ಣ ಸಾಲಗಾರರು ಪಡೆದಿರುವ ಸಾಲ ಮರುಪಾವತಿಗೆ ಸಂಬಂಧಿಸಿದ ಪ್ರಶ್ನೆಯೊಂದರಕ್ಕೆ ಈ ರೀತಿ ಉತ್ತರವನ್ನು ನಿರ್ಮಲ ಸೀತಾರಾಮನ್ ನೀಡಿದ್ದಾರೆ ಎಂದು ವರದಿಯಾಗಿದೆ.ಕೆಲವು ಬ್ಯಾಂಕ್ಗಳು ಕಠೋರ ನಿಯಮಗಳು ಹಾಗೂ ದರ್ಪ ಮತ್ತು ನಿಷ್ಕರುಣೆಯಿಂದ ಸಾಲ ಮರುಪಾವತಿಯನ್ನು ಅನುಸರಿಸಿವೆ ಎಂಬುದರ ಕುರಿತು ದೂರುಗಳನ್ನು ಸ್ವೀಕರಿಸಿದ್ದೇನೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು. ಸಾಲ ಮರುಪಾವತಿ ಪ್ರಕ್ರಿಯೆಗೆ ಬಂದಾಗ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬಾರದು ಮತ್ತು ಮಾನವೀಯತೆ ಮತ್ತು ಸೂಕ್ಷ್ಮತೆಯನ್ನು ಮನಸ್ಸಿನಲ್ಲಿಟ್ಟುಕೊಂಡು ವಿಷಯವನ್ನು ಸಮೀಪಿಸಬೇಕು ಎಂದು ಸರಕಾರವು ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್ಗಳಿಗೆ ಸೂಚನೆ ನೀಡಿದೆ” ಎಂದು ಹೇಳಿದರು ಎಂಬುದಾಗಿ ವರದಿಯಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…