ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ.
ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ ಏಕೈಕ ಪುತ್ರ ಆತ್ಮಹತ್ಯೆ ಮಾಡಿಕೊಂಡ ಬಾಲಕನಾಗಿದ್ದಾನೆ. ತೇಜಸ್ ಮೊಡಂಕಾಪು ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಇವತ್ತು ಆತನಿಗೆ ಪರೀಕ್ಷೆ ಇದ್ದು, ಸಂಜೆ ವೇಳೆ ಕ್ಲಾಸಿನಿಂದ ಮನೆಗೆ ಬಂದಿದ್ದಾನೆ. ತಂದೆ ತಾಯಿ ಇಬ್ಬರು ಖಾಸಗಿ ಕೆಲಸದಲ್ಲಿರುವ ಕಾರಣ ಅವರು ಮನೆಗೆ ಬರುವಾಗ ರಾತ್ರಿಯಾಗುತ್ತದೆ. ಮಗ ಎಂದಿನAತೆ ಸಂಜೆ ಮನೆಗೆ ಬಂದು ಮನೆಯಲ್ಲಿ ಇರುತ್ತಾನೆ. ಅದೇ ರೀತಿ ತಂದೆ ಮನೆಗೆ ಬಂದಾಗ ಬಾಗಿಲು ಹಾಕಿದ್ದು, ಕಂಡು ಮನೆಯೊಳಗೆ ನೋಡಿದಾಗ ಕೋಣೆಯಲ್ಲಿ ಈತ ನೇಣು ಬಿಗಿದು ನೇತಾಡುವುದು ಕಂಡು ಬಂದಿದೆ. ಕೂಡಲೇ ಆಸ್ಪತ್ರೆಗೆ ತರಲಾಗಿದೆಯಾದರೂ ಆತ ಮೃತಪಟ್ಟಿರುವುದಾಗಿ ವೈದ್ಯರು ಪರೀಕ್ಷಿಸಿ ತಿಳಿಸಿದ್ದಾರೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…