ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಪತನದ ಭೀತಿಯಲ್ಲಿ ಇಕ್ಕೇರಿ ನಾಯಕರ ಕುಂಬ್ಳೆ ಕೋಟೆ

ತುಳುನಾಡಿನ ಇತಿಹಾಸದ ಭವ್ಯತೆಯನ್ನು ಸಾರುವ ದೇವಾಲಯಗಳು, ಕೋಟೆಗಳನ್ನ ಕೆಲ ಪ್ರದೇಶಗಳಲ್ಲಿ ಇನ್ನು ನೋಡಬಹುದಾಗಿದೆ.

ಕುಂಬಳೆ ಅರಸರ ಕೇಂದ್ರವಾಗಿದ್ದ ಕಣ್ವಪುರ ಸನಿಹದಲ್ಲೇ ಕೆಳದಿ ನಾಯಕರ ಕುಂಬ್ಳೆ ಕೋಟೆ ಇಂದಿಗೂ ಇದೆ. ಈ ಕೋಟೆಯನ್ನು 1608 ರ ಸುಮಾರಿಗೆ ಇಕ್ಕೇರಿ ದೊರೆ ಹಿರಿಯ ವೆಂಕಟಪ್ಪ ನಾಯಕ ನಿರ್ಮಿಸಿದ್ದಾರೆ ಎಂದು ಇತಿಹಾಸ ಹೇಳತ್ತೆ. ಇತಿಹಾಸದಲ್ಲಿ ಬಾಳಿದ ಕೋಟೆ ಇಂದು ವಿನಾಶದ ಅಂಚಿಕೆ ಹೋಗ್ತಾ ಇದೆ. ಮಳೆಗಾಲದ ಸಮಯದಲ್ಲಿ ಕೋಟೆಯ ಕಲ್ಲುಗಳು ಅದರ ಸುತ್ತ ಮುತ್ತ ಹಸಿರಿನ ಭವ್ಯತೆಯಲ್ಲಿ ಮರೆಯಾಗುವ ಜೊತೆಯಲ್ಲಿ ಇತಿಹಾಸದಿಂದಲೂ ಮರೆಯಾಗುವ ಭೀತಿಯಲ್ಲಿ ಇದೆ. ಸರಿಯಾದ ನಿರ್ವಹಣೆ ಇಲ್ಲದೆ ಇತಿಹಾಸ ಕೋಟೆ ಅಸಹಾಯಕವಾಗಿ ನಿಂತಿದೆ.

ಸುತ್ತಲು ಹರಡಿದ ಹಸಿರ ಕಾಡು ಪೊದೆ ಕಣ್ಣಿಗೆ ಸುಂದರಾವಾಗಿ ಕಂಡರೂ ಅದು ಕೋಟೆಯ ಸುತ್ತುವರೆದಾಗ ಇತಿಹಾಸದ ಪತನವೇ ಸರಿ. ಪ್ರಮುಖ ಯಾತ್ರಾ ಸ್ಥಳವನ್ನಾಗಿ ಮಾರ್ಪಾಡು ಮಾಡಬಹುದಾದ ಸ್ಥಳ, ಸನಿಹವೇ ಇರುವ ರಾಷ್ಟ್ರೀಯ ಹೆದ್ದಾರಿ, ದೇವಾಲಯಗಳು ಈ ಕೋಟೆಯನ್ನು ದೊಡ್ಡ ಪ್ರವಾಸಿ ಕೇಂದ್ರವನ್ನಾಗಿ ಮಾಡಬಹುದು. ಆದರೆ ಈ ಬಗ್ಗೆ ಸರಕಾರ ಮುತುವರ್ಜಿ ವಹಿಸದೆ ಅದು ಹಾಗೆ ಉಳಿದಿರುವುದು ಬೇಸರದ ಸಂಗತಿ. ಕುಂಬ್ಳೆ ಕೋಟೆ ಇತ್ತೀಚಿಗೆ ಅವ್ಯಹಾರಗಳ ತಾಣವಾಗಿದೆ. ಈ ತಾಣ ಧೂಮಪಾನ ಮಧ್ಯಪಾನ ವ್ಯಸನಿಗಳ ಮಿನಿ ಬಾರ್ ಆಗಿ ಕೂಡ ಮಾರ್ಪಟ್ಟಿರುವುದು ದುರಂತ. ಸ್ಥಳೀಯ ಅಧಿಕಾರಿಗಳು, ಕೇರಳ ಪುರಾತತ್ವ ಇಲಾಖೆ ಈ ಬಗ್ಗೆ ಗಮನ ಹರಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಕಾಸರಗೋಡು ಜಿಲ್ಲೆಯಲ್ಲಿ ಬೇಕಲ ಕೋಟೆ ಒಂದು ಬಿಟ್ಟು ಮತ್ತೆಲ್ಲಾ ಕೋಟೆಯ ವ್ಯಥೆ ಇದುವೇ ಆಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!