ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: 6ನೇ ವಾರ್ಷಿಕ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ; ಕುಂದಾಪುರ ಆನಗಳ್ಳಿಯ ಗೆಳೆಯರ ಬಳಗ ಸಭಾಂಗಣದಲ್ಲಿ ಆಯೋಜನೆ

6ನೇ ವಾರ್ಷಿಕ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಕುಂದಾಪುರ ಆನಗಳ್ಳಿಯ ಗೆಳೆಯರ ಬಳಗ ಸಭಾಂಗಣದಲ್ಲಿ ನಡೆಯಿತು. ದತ್ತಾಶ್ರಮ ಆಧಿಶಕ್ತಿ ಮಠ, ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ, ಗೆಳೆಯರ ಬಳಗ(ರಿ) ಆನಗಳ್ಳಿ, ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್, ರಿಜಾಯ್ಸ್ ಈವೆಂಟ್, ಮಣಿಪಾಲ ಕೆಎಂಸಿ ಹಾಸ್ಪಿಟಲ್, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ಸಹಯೋಗದೊಂದಿಗೆ ಶಿಬಿರ ನಡೆದಿದೆ.

ಗೀತಾಂದ ಫೌಂಡೇಶನ್‌ನ ಅಧ್ಯಕ್ಷ ಆನಂದ ಸಿ.ಕುಂದರ್ 6ನೇ ವಾರ್ಷಿಕ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದ್ರು. ಬಳಿಕ ಅವರು ಮಾತನಾಡಿ, ಜಗತ್ತಿನಲ್ಲಿ ಬೇರೆ ಬೇರೆ ಟೆಕ್ನಾಲಜಿ ಬಂದಿರಬಹುದು ಆದರೆ ರಕ್ತಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳಲಿಕ್ಕೆ ಮನುಷ್ಯನಿಗೆ ಇನ್ನೂ ಸಾಧ್ಯವಾಗಲಿಲ್ಲ ವಿಜ್ಞಾನಿಗಳಿಗೆ ಸಾಧ್ಯವಾಗಲಿಲ್ಲ ರಕ್ತದಾನಿಗಳು ಹೆಚ್ಚು ಹೆಚ್ಚು ರಕ್ತದಾನ ಮಾಡುವ ಮೂಲಕ ಹಲವು ಜೀವಗಳನ್ನು ಉಳಿಸುವ ಪುಣ್ಯ ಕಾರ್ಯದಲ್ಲಿ ಯುವಕರು ಕೈಜೋಡಿಸಿ ಎಂದು ಹೇಳಿದ್ದಾರೆ. ಭಾರತೀಯ ರೆಡ್ ಕ್ರಾಸ್ ಕುಂದಾಪುರ ಸಭಾಪತಿ ಜಯಕರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಒಂದು ಶಿಬಿರಲ್ಲಿ 280 ಯುನಿಟ್ ರಕ್ತ ಸಂಗ್ರಹಿಸುವ ಮೂಲಕ ಇದು ಒಂದು ಮಹತ್ತರದ ಹಾಗೂ ಅರ್ಥ ಪೂರ್ಣ ಶಿಬಿರವಾಗಿದೆ ಎಂದು ಶ್ಲಾಘಿಸಿದ್ದಾರೆ. ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣೆಪಾಲ ಪ್ರಾಸ್ತಾವಿಕ ಮಾತುಗಳನ್ನಾಡಿದ್ರು. ಈ ಸಂದರ್ಭದಲ್ಲಿ ರಂಗಭೂಮಿ ಕಲಾವಿದ ಅಶೋಕ್ ದೇವಾಡಿಗ, ಪತ್ರಕರ್ತ ಆರೀಫ್ ಯು.ಆರ್, ಕೆಎಂಸಿ ಆಸ್ಪತ್ರೆಯ ರಕ್ತನಿಧಿ ವಿಭಾಗದ ವಿಶ್ವೇಶ್ ರವರನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!