6ನೇ ವಾರ್ಷಿಕ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಕುಂದಾಪುರ ಆನಗಳ್ಳಿಯ ಗೆಳೆಯರ ಬಳಗ ಸಭಾಂಗಣದಲ್ಲಿ ನಡೆಯಿತು. ದತ್ತಾಶ್ರಮ ಆಧಿಶಕ್ತಿ ಮಠ, ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ, ಗೆಳೆಯರ ಬಳಗ(ರಿ) ಆನಗಳ್ಳಿ, ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್, ರಿಜಾಯ್ಸ್ ಈವೆಂಟ್, ಮಣಿಪಾಲ ಕೆಎಂಸಿ ಹಾಸ್ಪಿಟಲ್, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ಸಹಯೋಗದೊಂದಿಗೆ ಶಿಬಿರ ನಡೆದಿದೆ.
ಗೀತಾಂದ ಫೌಂಡೇಶನ್ನ ಅಧ್ಯಕ್ಷ ಆನಂದ ಸಿ.ಕುಂದರ್ 6ನೇ ವಾರ್ಷಿಕ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದ್ರು. ಬಳಿಕ ಅವರು ಮಾತನಾಡಿ, ಜಗತ್ತಿನಲ್ಲಿ ಬೇರೆ ಬೇರೆ ಟೆಕ್ನಾಲಜಿ ಬಂದಿರಬಹುದು ಆದರೆ ರಕ್ತಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳಲಿಕ್ಕೆ ಮನುಷ್ಯನಿಗೆ ಇನ್ನೂ ಸಾಧ್ಯವಾಗಲಿಲ್ಲ ವಿಜ್ಞಾನಿಗಳಿಗೆ ಸಾಧ್ಯವಾಗಲಿಲ್ಲ ರಕ್ತದಾನಿಗಳು ಹೆಚ್ಚು ಹೆಚ್ಚು ರಕ್ತದಾನ ಮಾಡುವ ಮೂಲಕ ಹಲವು ಜೀವಗಳನ್ನು ಉಳಿಸುವ ಪುಣ್ಯ ಕಾರ್ಯದಲ್ಲಿ ಯುವಕರು ಕೈಜೋಡಿಸಿ ಎಂದು ಹೇಳಿದ್ದಾರೆ. ಭಾರತೀಯ ರೆಡ್ ಕ್ರಾಸ್ ಕುಂದಾಪುರ ಸಭಾಪತಿ ಜಯಕರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಒಂದು ಶಿಬಿರಲ್ಲಿ 280 ಯುನಿಟ್ ರಕ್ತ ಸಂಗ್ರಹಿಸುವ ಮೂಲಕ ಇದು ಒಂದು ಮಹತ್ತರದ ಹಾಗೂ ಅರ್ಥ ಪೂರ್ಣ ಶಿಬಿರವಾಗಿದೆ ಎಂದು ಶ್ಲಾಘಿಸಿದ್ದಾರೆ. ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣೆಪಾಲ ಪ್ರಾಸ್ತಾವಿಕ ಮಾತುಗಳನ್ನಾಡಿದ್ರು. ಈ ಸಂದರ್ಭದಲ್ಲಿ ರಂಗಭೂಮಿ ಕಲಾವಿದ ಅಶೋಕ್ ದೇವಾಡಿಗ, ಪತ್ರಕರ್ತ ಆರೀಫ್ ಯು.ಆರ್, ಕೆಎಂಸಿ ಆಸ್ಪತ್ರೆಯ ರಕ್ತನಿಧಿ ವಿಭಾಗದ ವಿಶ್ವೇಶ್ ರವರನ್ನು ಸನ್ಮಾನಿಸಲಾಯಿತು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…