ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ನ ಕೃಷ್ಣಾಪುರ ಹಿಲ್ಸೈಡ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಮೃತರನ್ನು ಹಿಲ್ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ 18 ವರ್ಷದ ಅಫ್ತಾಬ್ ಎಂದು ಗುರುತಿಸಲಾಗಿದೆ. ಇವರು ಸುರತ್ಕಲ್ನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಫ್ತಾಬ್ ಮನೆಯಲ್ಲಿ ಸ್ನಾನಕ್ಕೆ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅಫ್ತಾಬ್ ಅಸ್ಗರ್ ಅಲಿ ಅವರ ನಾಲ್ಕು ಮಕ್ಕಳಲ್ಲಿ ಏಕೈಕ ಪುತ್ರ. ಅವರ ಮೂವರು ಸಹೋದರಿಯರು ವಿವಾಹವಾಗಿದ್ದಾರೆ. ಅವರ ತಾಯಿ ಕೋವಿಡ್ ಸಮಯದಲ್ಲಿ ನಿಧನರಾಗಿದ್ರು. ಅಂದಿನಿಂದ ತಂದೆ ಮತ್ತು ಮಗ ಮಾತ್ರ ಒಟ್ಟಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ಆಟೋ ರಿಕ್ಷಾ ಚಾಲಕರಾದ ಅಲಿ, ಮಧ್ಯಾಹ್ನದವರೆಗೂ ತಮ್ಮ ಮಗನೊಂದಿಗೆ ಮನೆಯಲ್ಲಿದ್ರು. ಅವರು ಸುಮಾರು 1 ಗಂಟೆಗೆ ಕೆಲಸಕ್ಕೆ ಹೋದ ನಂತರ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…