ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ `ಜೈ’ ತುಳು ಸಿನಿಮಾ ನವಂಬರ್ 14 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.
ಮೊನ್ನೆ ಶಿವರಾಜ್ ಕುಮಾರ್ ಅವರು ಬೆಂಗಳೂರಿನಲ್ಲಿ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ರು. “ಜೈ” ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ನ ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ ಕಲಾವಿದರು ಸಿನಿಮಾದಲ್ಲಿದ್ದಾರೆ. ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ.
ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ. ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕಥೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆದಿದೆ. ನವಂಬರ್ 14 ರಂದು “ಜೈ” ಸಿನಿಮಾ ತೆರೆ ಕಾಣಲಿದೆ. ನಟ ಶಿವರಾಜ್ ಕುಮಾರ್ ಜೈ ಚಿತ್ರದ ಬಗ್ಗೆ ಮಾತನಾಡಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…