ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ನ್ಯಾಯಾಲಯ ಕಟ್ಟಡ ಸಿದ್ಧಗೊಂಡು ಉದ್ಘಾಟನೆಗೆಗಾಗಿ ಕಾಯುತ್ತಿದೆ. ಸದ್ಯ ಹಳೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನ್ಯಾಯಾಲಯವು ಉದ್ಘಾಟನೆ ಬಳಿಕ ಬನ್ನೂರಿನ ಹೊಸ ನ್ಯಾಯಾಲಯ ಸಂಕೀರ್ಣಕ್ಕೆ ಶಿಫ್ಟ್ ಆಗಲಿದೆ.
2022ರಲ್ಲಿ ಈ ಹೊಸ ನ್ಯಾಯಾಲಯ ಕಟ್ಟಡದ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಇದೀಗ ಕಟ್ಟಡದ ಬಹುತೇಕ ಕಾಮಗಾರಿಗಳು ಮುಕ್ತಾಯವಾಗಿದೆ. ಅಂದಿನ ಶಾಸಕರಾಗಿದ್ದ ಸಂಜೀವ ಮಠಂದೂರು ಮೂಲಕ ಸುಮಾರು 50 ಕೋಟಿ ವೆಚ್ಚದ ನ್ಯಾಯಾಲಯ ಸಂಕೀರ್ಣ ಮತ್ತು 5 ಕೋಟಿ ವೆಚ್ಚದ ವಕೀಲರ ಸಂಘದ ಕಟ್ಟಡ ಇಲ್ಲಿ ನಿರ್ಮಾಣಗೊಂಡಿದೆ. ಮೊದಲ ಹಂತದಲ್ಲಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ನ್ಯಾಯಾಲಯ ಸಂಕೀರ್ಣ ಮತ್ತು 5 ಕೋಟಿ ರೂಪಾಯಿ ವೆಚ್ಚದಲ್ಲಿ ವಕೀಲರ ಸಂಘದ ಕಟ್ಟಡವನ್ನು ನಿರ್ಮಿಸುವ ಯೋಜನೆಯಿತ್ತು. ಆ ಬಳಿಕ ಅಂದಿನ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಇದೇ ನ್ಯಾಯಾಲಯ ಸಂಕೀರ್ಣ ಜಿಲ್ಲಾ ನ್ಯಾಯಾಲಯದ ಸ್ಥಾಪನೆಗೂ ಅವಕಾಶವಿರಬೇಕು ಎನ್ನುವ ಕಾರಣಕ್ಕೆ ಇದೇ ಕಟ್ಟಡಕ್ಕೆ ಹೆಚ್ಚುವರಿ 25 ಕೋಟಿ ರೂಪಾಯಿಗಳನ್ನು ವಿನಿಯೋಗಿಸಿ ಒಟ್ಟು 55 ಕೋಟಿ ರೂಪಾಯಿ ವ್ಯಯಿಸಿ ಈ ಕಟ್ಟಡದ ನಿರ್ಮಾಣವಾಗಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…