ರಾಜ್ಯ ಸರಕಾರ ಹಿಂದೂ ವಿರೋಧಿ ಧೋರಣೆಯ ಮೂಲಕ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಕಾನೂನು ವಿರೋಧಿ ಕ್ರಮಗಳನ್ನು ನಡೆಸುತ್ತಿದೆ ಎಂದು ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಪರಿವಾರ ಸಂಘಟನೆಗಳ ಸಹಭಾಗಿತ್ವದಲ್ಲಿ ದರ್ಬೆಯಲ್ಲಿ ಪ್ರತಿಭಟನೆ ನಡೆಯಿತು.
ಹಿಂದು ಜಾಗರಣ ವೇದಿಕೆ ಕರ್ನಾಟಕ ಪ್ರಾಂತದ ಕಾರ್ಯಾಕಾರಿಣಿ ಸದಸ್ಯ ಅಜಿತ್ ಕೊಡಗು ಅವರು ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರಕಾರ ಇವತ್ತು ಹಿಂದು ಕಾರ್ಯಕರ್ತರನ್ನು ಯಾವುದೇ ಕಾರ್ಯಕ್ರಮಕ್ಕೆ ಹೋಗದಂತೆ ಅಡ್ಡಿಪಡಿಸುವ ಕೆಲಸ ಮಾಡುತ್ತಿದೆ. ದ ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಸರಕಾರ ಇಸ್ಲಾಮಿಕ್ ಒಟ್ ಬ್ಯಾಂಕ್ಗಾಗಿ ರಾಜಕಾರಣ ಮಾಡುತ್ತಿದೆ. ಸ್ವಾತಂತ್ರ ಪೂರ್ವದಲ್ಲೂ ಯಾವುದೇ ಕಾರಣಕ್ಕೂ ದೇಶ ಇಸ್ಲಾಮಿಕ್ ಆಗಲಿಲ್ಲ ಕಾರಣ ಇಷ್ಟೆ. ಆಗ ದೇಶ ಭಕ್ತರು ಮತಾಂತರ ಅಗಲಿಲ್ಲ. ಅವತ್ತಿನ ಕಾಲಗಟ್ಟದಲ್ಲಿ ಕೂಡಾ ಸೋಗಲಾಡಿತನ ಇತ್ತು. ಆದರೂ ಈ ಧರ್ಮವನ್ನು ಅಲುಗಾಡಿಸಲು ಆಗಲಿಲ್ಲ. ಇವತ್ತು ಕಾರ್ಯಕರ್ತರ ಹತ್ಯೆಗೆ ಸೂಪಾರಿಯನ್ನು ಸರಕಾರ ನೀಡುತ್ತಿದೆ. ನಾವು ನಮ್ಮ ರಾಷ್ಟ್ರ ಧರ್ಮ ಉಳಿಸಲು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದೇ ವೇಳೆ ಪುತ್ತೂರು ಜಿಲ್ಲಾ ಸಂಯೋಜಕ ಮೋಹನ್ ದಾಸ್ ಕಾಣಿಯೂರು ಮಾತನಾಡಿದ್ರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…