ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಪುತ್ತೂರು ಶಾಸಕರ ಬಗ್ಗೆ ಅವಹೇನಕಾರಿಯಾಗಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುಳ್ಯದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಪ್ರತಿಕ್ರಿಯೆ ನೀಡಿದ್ದಾರೆ.

ಇತರರನ್ನು ಏಕವಚನದಲ್ಲಿ ಮಾತನಾಡೋದು ಅವರ ಸಂಸ್ಕೃತಿಯಲ್ಲ. ನಿನ್ನೆ ನಡೆದ ಪ್ರತಿಭಟನೆಯಲ್ಲಿ ಪುತ್ತೂರಿನ ಆ ಸಂಘಟನೆಗೆ ಸೇರಿದ ಕೇವಲ ಇಬ್ಬರೇ ವ್ಯಕ್ತಿಗಳು ಇದ್ರು. ಉಳಿದವರೆಲ್ಲಾ ಸುಳ್ಯ ಮತ್ತು ಇತರ ಕಡೆಗಳಿಗೆ ಸೇರಿದವರು. ಪ್ರತಿಭಟನೆಯಲ್ಲಿ ಯಾವನೋ ಒಬ್ಬ ಮುಟ್ಟಾಳ ಎಲ್ಲಿಂದಲೋ ಬಂದು ಮಾತನಾಡಿದ್ದಾನೆ. ಅವನು ಸ್ವಲ್ಪ ಹೊತ್ತು ಪುತ್ತೂರಿನಲ್ಲಿರಬೇಕಿತ್ತು. ಅವನಿಗೆ ಬುದ್ಧಿ ಕಲಿಸುವ ಕೆಲಸ ಮಾಡುತ್ತಿದ್ದೆ. ನಾವು ಯಾರಿಗೂ ವಿರೋಧವಿಲ್ಲ. ಆದರೆ ಯಾರು ಅನಾವಶ್ಯಕವಾಗಿ ಇಂಥಹ ವಿಚಾರ ಸೃಷ್ಠಿ ಮಾಡುತ್ತಾರೋ ಅಂತವರಿಗೆ ಬುದ್ಧಿ ಕಲಿಸುವ ಕೆಲಸ ಮಾಡುತ್ತೇವೆ. ಯಾರನ್ನೋ ಏಕವಚನದಲ್ಲಿ ನಿಂದಿಸಿದ ಕೂಡಲೇ ಯಾರೂ ದೊಡ್ಡ ಜನ ಆಗುದಿಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ವಾಗ್ದಾಳಿ ನಡೆಸಿದ್ರು.



