ಜನ ಮನದ ನಾಡಿ ಮಿಡಿತ

Advertisement

ಸುಬ್ರಹ್ಮಣ್ಯ: ದ.ಕ.ಜಿಲ್ಲೆಯಲ್ಲೇ ಕಠಿಣ ಕ್ರಮಕೈಗೊಂಡ ಹಿನ್ನಲೆ ಕಾನೂನು ಸುವ್ಯವಸ್ಥೆ ಉತ್ತಮ; ಗೃಹ ಸಚಿವರು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಇವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಕೇವಲ ಹೇಳಿಕೆಯಾಗಿ ನಾನು ಈ ರೀತಿಯಾಗಿ ಹೇಳುತ್ತಿಲ್ಲ.

ಇತ್ತೀಚೆಗೆ ನಡೆದ ಕಾನ್ಫೆರೆನ್ಸ್ನಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ, ವಿವಿಧ ಅಪರಾಧಗಳ ಬಗ್ಗೆ ಮಾಹಿತಿ ಪಡೆದ ವೇಳೆ ಕ್ರೈಂ ರೇಟ್ ಕಡಿಮೆಯಾಗಿರುವುದು ಕಂಡುಬಂದಿದೆ. ಕಾನೂನುನನ್ನು ಬಹಳ ಕಠಿಣವಾಗಿ ತೆಗೆದುಕೊಂಡಿದ್ದರಿಂದ ಕ್ರೈಂ ರೇಟ್ ಕಡಿಮೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಗಮನಿಸಿದಾಗ ಕಠಿಣ ಕ್ರಮಕೈಗೊಂಡ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರಲು ಸಾಧ್ಯವಾಗಿದೆ ಎಂದ್ರು. ವಿಶೇಷ ಕಾರ್ಯಪಡೆ ರಚನೆಯಿಂದ ಶಾಂತಿ-ಸುವ್ಯವಸ್ಥೆಗೆ ಪೂರಕವಾಗಿದೆ. ಈ ಬಗ್ಗೆ ಶ್ಲಾಘನೆ ವ್ಯಕ್ತವಾಗಿದೆ. ಬೆಂಗಳೂರು ಬಳಿಕ ಬೆಳೆಯುವಲ್ಲಿ ಅವಕಾಶಗಳಿರುವ ಕರಾವಳಿಯಲ್ಲಿ ಶಾಂತಿ ಅತೀ ಮುಖ್ಯ, ಅದಕ್ಕಾಗಿ ಈ ಭಾಗಕ್ಕೆ ಹೆಚ್ಚು ಗಮನ ಹರಿಸುತ್ತೇವೆ. ಒಂದೆರಡು ಜನ ಬೇರೆ ರೀತಿಯಲ್ಲಿ ಇದ್ರೂ ಜಿಲ್ಲೆಯ ಜನ ಉತ್ತಮರು ಎಂದಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನಿವಾರಿಸಲು ನೇಮಕಾತಿ ನಡೆಯುತ್ತಿದೆ. 545 ಎಸೈಗಳಿಗೆ ಆದೇಶ ನೀಡಲಾಗಿದ್ದು, ತರಬೇತಿಗೆ ಹೋಗಿದ್ದಾರೆ. ಇನ್ನೂ 402 ಹುದ್ದೆಗೆ ಆದೇಶವಾಗಲಿದೆ. 10-15 ಸಾವಿರ ಕಾನ್ಸೆಟೇಬಲ್ ಹುದ್ದೆ ಖಾಲಿ ಇದೆ. ಅದನ್ನು ಭರ್ತಿ ಮಾಡಲು ಕ್ರಮಕೈಗೊಳ್ಳುತ್ತೇವೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!