ಜನ ಮನದ ನಾಡಿ ಮಿಡಿತ

Advertisement

ಸುಬ್ರಹ್ಮಣ್ಯ: ದ.ಕ.ಜಿಲ್ಲೆಯಲ್ಲೇ ಕಠಿಣ ಕ್ರಮಕೈಗೊಂಡ ಹಿನ್ನಲೆ ಕಾನೂನು ಸುವ್ಯವಸ್ಥೆ ಉತ್ತಮ; ಗೃಹ ಸಚಿವರು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಇವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಕೇವಲ ಹೇಳಿಕೆಯಾಗಿ ನಾನು ಈ ರೀತಿಯಾಗಿ ಹೇಳುತ್ತಿಲ್ಲ.

ಇತ್ತೀಚೆಗೆ ನಡೆದ ಕಾನ್ಫೆರೆನ್ಸ್ನಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ, ವಿವಿಧ ಅಪರಾಧಗಳ ಬಗ್ಗೆ ಮಾಹಿತಿ ಪಡೆದ ವೇಳೆ ಕ್ರೈಂ ರೇಟ್ ಕಡಿಮೆಯಾಗಿರುವುದು ಕಂಡುಬಂದಿದೆ. ಕಾನೂನುನನ್ನು ಬಹಳ ಕಠಿಣವಾಗಿ ತೆಗೆದುಕೊಂಡಿದ್ದರಿಂದ ಕ್ರೈಂ ರೇಟ್ ಕಡಿಮೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಗಮನಿಸಿದಾಗ ಕಠಿಣ ಕ್ರಮಕೈಗೊಂಡ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರಲು ಸಾಧ್ಯವಾಗಿದೆ ಎಂದ್ರು. ವಿಶೇಷ ಕಾರ್ಯಪಡೆ ರಚನೆಯಿಂದ ಶಾಂತಿ-ಸುವ್ಯವಸ್ಥೆಗೆ ಪೂರಕವಾಗಿದೆ. ಈ ಬಗ್ಗೆ ಶ್ಲಾಘನೆ ವ್ಯಕ್ತವಾಗಿದೆ. ಬೆಂಗಳೂರು ಬಳಿಕ ಬೆಳೆಯುವಲ್ಲಿ ಅವಕಾಶಗಳಿರುವ ಕರಾವಳಿಯಲ್ಲಿ ಶಾಂತಿ ಅತೀ ಮುಖ್ಯ, ಅದಕ್ಕಾಗಿ ಈ ಭಾಗಕ್ಕೆ ಹೆಚ್ಚು ಗಮನ ಹರಿಸುತ್ತೇವೆ. ಒಂದೆರಡು ಜನ ಬೇರೆ ರೀತಿಯಲ್ಲಿ ಇದ್ರೂ ಜಿಲ್ಲೆಯ ಜನ ಉತ್ತಮರು ಎಂದಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನಿವಾರಿಸಲು ನೇಮಕಾತಿ ನಡೆಯುತ್ತಿದೆ. 545 ಎಸೈಗಳಿಗೆ ಆದೇಶ ನೀಡಲಾಗಿದ್ದು, ತರಬೇತಿಗೆ ಹೋಗಿದ್ದಾರೆ. ಇನ್ನೂ 402 ಹುದ್ದೆಗೆ ಆದೇಶವಾಗಲಿದೆ. 10-15 ಸಾವಿರ ಕಾನ್ಸೆಟೇಬಲ್ ಹುದ್ದೆ ಖಾಲಿ ಇದೆ. ಅದನ್ನು ಭರ್ತಿ ಮಾಡಲು ಕ್ರಮಕೈಗೊಳ್ಳುತ್ತೇವೆ ಎಂದಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!