ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಇವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಕೇವಲ ಹೇಳಿಕೆಯಾಗಿ ನಾನು ಈ ರೀತಿಯಾಗಿ ಹೇಳುತ್ತಿಲ್ಲ.
ಇತ್ತೀಚೆಗೆ ನಡೆದ ಕಾನ್ಫೆರೆನ್ಸ್ನಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ, ವಿವಿಧ ಅಪರಾಧಗಳ ಬಗ್ಗೆ ಮಾಹಿತಿ ಪಡೆದ ವೇಳೆ ಕ್ರೈಂ ರೇಟ್ ಕಡಿಮೆಯಾಗಿರುವುದು ಕಂಡುಬಂದಿದೆ. ಕಾನೂನುನನ್ನು ಬಹಳ ಕಠಿಣವಾಗಿ ತೆಗೆದುಕೊಂಡಿದ್ದರಿಂದ ಕ್ರೈಂ ರೇಟ್ ಕಡಿಮೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಗಮನಿಸಿದಾಗ ಕಠಿಣ ಕ್ರಮಕೈಗೊಂಡ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರಲು ಸಾಧ್ಯವಾಗಿದೆ ಎಂದ್ರು. ವಿಶೇಷ ಕಾರ್ಯಪಡೆ ರಚನೆಯಿಂದ ಶಾಂತಿ-ಸುವ್ಯವಸ್ಥೆಗೆ ಪೂರಕವಾಗಿದೆ. ಈ ಬಗ್ಗೆ ಶ್ಲಾಘನೆ ವ್ಯಕ್ತವಾಗಿದೆ. ಬೆಂಗಳೂರು ಬಳಿಕ ಬೆಳೆಯುವಲ್ಲಿ ಅವಕಾಶಗಳಿರುವ ಕರಾವಳಿಯಲ್ಲಿ ಶಾಂತಿ ಅತೀ ಮುಖ್ಯ, ಅದಕ್ಕಾಗಿ ಈ ಭಾಗಕ್ಕೆ ಹೆಚ್ಚು ಗಮನ ಹರಿಸುತ್ತೇವೆ. ಒಂದೆರಡು ಜನ ಬೇರೆ ರೀತಿಯಲ್ಲಿ ಇದ್ರೂ ಜಿಲ್ಲೆಯ ಜನ ಉತ್ತಮರು ಎಂದಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನಿವಾರಿಸಲು ನೇಮಕಾತಿ ನಡೆಯುತ್ತಿದೆ. 545 ಎಸೈಗಳಿಗೆ ಆದೇಶ ನೀಡಲಾಗಿದ್ದು, ತರಬೇತಿಗೆ ಹೋಗಿದ್ದಾರೆ. ಇನ್ನೂ 402 ಹುದ್ದೆಗೆ ಆದೇಶವಾಗಲಿದೆ. 10-15 ಸಾವಿರ ಕಾನ್ಸೆಟೇಬಲ್ ಹುದ್ದೆ ಖಾಲಿ ಇದೆ. ಅದನ್ನು ಭರ್ತಿ ಮಾಡಲು ಕ್ರಮಕೈಗೊಳ್ಳುತ್ತೇವೆ ಎಂದಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…