ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕಂಟೆಂಟ್ ಕ್ರಿಯೇಟರ್ಸ್ಗೆ ಶಾಕ್!!???.. ಇನ್ನು ಮುಂದೆ ಯೂಟ್ಯೂಬ್‌ನಿಂದ ಹಣ ಗಳಿಸೋದು ಸುಲಭದ ಮಾತಲ್ಲ..!

ಕಂಟೆಂಟ್ ಕ್ರಿಯೇಟರ್ಸ್ಗಳಿಗೆ ಯೂಟ್ಯೂಬ್ ಶಾಕ್ ಕೊಟ್ಟಿದೆ. ಜುಲೈ 15ರ ನಂತರ ಯೂಟ್ಯೂಬ್ ಮೂಲಕ ಹಣ ಗಳಿಕೆ ಸ್ವಲ್ಪ ಕಠಿಣವಾಗಲಿದೆ. ಇತ್ತೀಚಿನ ದಿನಗಳಲ್ಲಿ ಯೂಟ್ಯೂಬ್ ಚಾನೆಲ್‌ಗಳ ಸಂಖ್ಯೆ ವಿಪರೀತ ಹೆಚ್ಚಾಗಿದೆ. ಅದರಲ್ಲೂ ಸಾಕಷ್ಟು ಮಂದಿ ಯೂಟ್ಯೂಬ್‌ನಲ್ಲಿ ವಿಡಿಯೋ ಮಾಡಿ ಹಣವನ್ನು ಬಹಳ ಸುಲಭವಾಗಿ ಗಳಿಸುತ್ತಿದ್ದಾರೆ. ಜನರು ಎಐ ಬಳಸಿ, ಸುಲಭವಾಗಿ, ಯಾವುದೇ ಶ್ರಮವಿಲ್ಲದೆ ವಿಡಿಯೋ ಶೇರ್ ಮಾಡಿ ಸಂಪಾದಿಸುತ್ತಿದ್ದಾರೆ.


ಅಷ್ಟೇ ಅಲ್ಲದೇ ಮತ್ತೆ ಕೆಲವರು ಬೇರೆ ಕಡೆಯ ವಿಡಿಯೋಗಳನ್ನು ಬದಲಾವಣೆ ಮಾಡಿ ಹಾಕ್ತಿದ್ದಾರೆ. ಈಗ ಹಾಗೇ ಮಾಡಲು ಆಗೋದಿಲ್ಲ. ತನ್ನ ವಿಡಿಯೋ ಕ್ರಿಯೇಟರ್‌ಗಳಿಗೆ ಹೊಸ ಶಾಕ್ ನೀಡಿದೆ. ಲಾಭ ಗಳಿಸುವ ಮಾದರಿಯಲ್ಲಿ ಹಲವು ನಿಮಯಗಳ ಬದಲಿಸುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಯುಟ್ಯೂಬ್ ಸಂಸ್ಥೆ ಮುಂದಾಗಿದೆ. ತನ್ನ ಮೋನಟೈಸೇಶನ್ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡ್ತಿದೆ. ಹೊಸ ನಿಯಮ ಇದೇ ಜುಲೈ 15ರಿಂದ ಜಾರಿಗೆ ಬರಲಿದೆ. ಹಳೆ ವಿಡಿಯೋಗಳನ್ನು ಮತ್ತೆ ಮತ್ತೆ ಅಪ್ಲೋಡ್ ಮಾಡಿ ವೀವ್ಸ್ ಪಡೆಯುತ್ತಿರುವವರಿಗೆ ಕಡಿವಾಣ ಹಾಕಲು ಇದೀಗ ಯೂಟ್ಯೂಬ್ ಮುಂದಾಗಿದೆ. ಜುಲೈ 15, 2025 ರಿಂದ, ಪದೇ ಪದೆ ಒಂದೇ ವಿಡಿಯೋ ಅಪ್ಲೋಡ್ ಮಾಡಿದ್ರೆ, ಅಥವಾ ಬೇರೆಯವರ ವಿಡಿಯೋವನ್ನು ನಕಲಿ ಮಾಡಿ ಪೋಸ್ಟ್ ಮಾಡಿದ್ರೆ ಅಂಥ ಖಾತೆದಾರರಿಗೆ ಯೂಟ್ಯೂಬ್ ಹಣಗಳಿಸಲು ಅವಕಾಶ ನೀಡುವುದಿಲ್ಲ. ಯೂಟ್ಯೂಬ್‌ನಲ್ಲಿ ಅಪ್ಲೋಡ್ ಆಗುವ ವಿಡಿಯೋಗಳ ಗುಣಮಟ್ಟವನ್ನು ಸುಧಾರಿಸುವ ಗುರಿಯಿಂದ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ. ಈ ಮೂಲಕ ಯೂಟ್ಯೂಬ್ ತನ್ನ ನಿಯಮಗಳನ್ನು ತಂದಿದೆ. ಜೊತೆಗೆ ನಿಜವಾದ ಕಂಟೆಂಟ್ ಕ್ರಿಯೇಟರ್ಸ್ ರಕ್ಷಿಸುವುದು ಮತ್ತು ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳುವ ಚಾನೆಲ್‌ಗಳ ಸಂಖ್ಯೆಯನ್ನು ಕಡಿಮೆ ಮಾಡುವುದು ಮುಖ್ಯ ಉದ್ದೇಶವಾಗಿದೆ.


ಇನ್ಮುಂದೆ ಬೇರೊಬ್ಬರ ವಿಷಯವನ್ನು ಎತ್ತಿಕೊಂಡು ಅದನ್ನು ಸ್ವಲ್ಪ ಬದಲಾಯಿಸಿ ಪೋಸ್ಟ್ ಮಾಡಲು ಅನುಮತಿ ನೀಡಲಾಗುವುದಿಲ್ಲ. ವೀಡಿಯೊವನ್ನು ಹೊಸದಾಗಿ ತಯಾರಿಸಬೇಕು. ಬೇರೆ ವಿಡಿಯೋವನ್ನು ಕೂಡ ಸಂಪೂರ್ಣ ಬದಲಿಸಿ ಪೋಸ್ಟ್ ಮಾಡ್ಬೇಕು. ಪುನರಾವರ್ತಿತ ವೀಡಿಯೊಗಳನ್ನು ನಿಷೇಧಿಸಲಾಗುವುದು. ಹಣ ಗಳಿಕೆಗೆ ನೀವು ಮಾಡಿದ ವಿಡಿಯೋವನ್ನೇ ಮತ್ತೆ ಮತ್ತೆ ಹಾಕುವಂತಿಲ್ಲ. ರೋಬೋಟ್‌ಗಳ ಧ್ವನಿ ಹೊಂದಿರುವ ವಿಡಿಯೋಕ್ಕೆ ಅವಕಾಶ ಇಲ್ಲ. ಬರೀ ಹಣ ಗಳಿಸುವ ಉದ್ದೇಶದಿಂದ ಮಾಹಿತಿ ಇಲ್ಲದ ಅಥವಾ ಮನರಂಜನೆ ಇಲ್ಲದ ವೀಡಿಯೊಗಳಿಗೆ ಅವಕಾಶ ಇಲ್ಲ. ಬಹಳ ಮುಖ್ಯವಾಗಿ ಯೂಟ್ಯೂಬ್ ತನ್ನ ನಿಯಮದಲ್ಲಿ ಎಲ್ಲೂ ಎಐ ಹೆಸರನ್ನು ಹೇಳಿಲ್ಲ. ಆದ್ರೆ ಎಐ ನಿಂದ ಮಾಡಿದ, ಮಾನವೀಯ ಸ್ಪರ್ಶವಿಲ್ಲದ, ಆಟೋ ಜನರೇಟ್ ಧ್ವನಿಯ ವಿಡಿಯೋವನ್ನು ಸಹ ಈ ಕಟ್ಟುನಿಟ್ಟಿನ ನಿಯಮದಲ್ಲಿ ತರಬಹುದು ಎನ್ನಲಾಗಿದೆ.

ಈ ಹಿಂದೆ ಯೂಟ್ಯೂಬ್‌ನಲ್ಲಿ ಹಣ ಗಳಿಸಲು 12 ತಿಂಗಳುಗಳಲ್ಲಿ 1,000 ಸಬ್‌ಸ್ಕ್ರೈಬರ್ ಮತ್ತು 4,000 ಗಂಟೆ ವೀವ್ಸ್ ಸಮಯ ಪೂರ್ಣಗೊಂಡಿರಬೇಕು. ಕಳೆದ 90 ದಿನಗಳಲ್ಲಿ ಶಾರ್ಟ್ಸ್ ವಿಡಿಯೋಗಳು 10 ಮಿಲಿಯನ್ ವೀವ್ಸ್ ಪಡೆದಿರಬೇಕು. ನೀವು ಇದನ್ನು ಪೂರ್ಣಗೊಳಿಸಿದ್ರೆ ಚಾನಲ್ ಹಣಗಳಿಕೆಗೆ ಒಪ್ಪಿಗೆ ನೀಡ್ತಿತ್ತು. ಈ ಹಿಂದೆ ಕಾಪಿ ಪೇಸ್ಟ್ಗೆ ಅವಕಾಶ ನೀಡಲಾಗಿತ್ತು. ಜೊತೆಗೆ ಎಐ ಬಳಕೆ ಮಾಡಬಹುದಾಗಿತ್ತು. ಜೊತೆಗೆ ಹಳೆ ವಿಡಿಯೋವನ್ನು ಮತ್ತೆ ಪೋಸ್ಟ್ ಮಾಡಬಹುದಿತ್ತು. ಆದರೆ ಈ ಬದಲಾವಣೆ ಸಾವಿರಾರು ಕಂಟೆಂಟ್ ಕ್ರಿಯೇಟರ್‌ಗಳ ಗಳಿಕೆ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!