ಜನ ಮನದ ನಾಡಿ ಮಿಡಿತ

Advertisement

ಲಂಚ ಸ್ವೀಕರಿಸುವಾಗ ಕದ್ರಿ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ…!

ಮಂಗಳೂರು: ಅಪಘಾತಗೊಂಡ ಕಾರು ಠಾಣೆಯಿಂದ ಬಿಡಿಸಿಕೊಳ್ಳಲು 50,000 ಲಂಚಕ್ಕೆ ಬೇಡಿಕೆ ಇಟ್ಟು, ಕೆಲವು ದಿನಗಳ ಚೌಕಾಸಿ ನಡೆದು, 5000 ರೂಪಾಯಿಗೆ ಒಪ್ಪಿ ಅದನ್ನು ಸ್ವೀಕರಿಸುವಾಗ ಕದ್ರಿ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ತಸ್ಲಿಂ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಸಿಬ್ಬಂದಿ.ಕಾರು ಮತ್ತು ಸ್ಕೂಟರ್ ಮದ್ಯೆ ನಂತೂರು ಸರ್ಕಲ್‌ನಲ್ಲಿ ಅಪಘಾತ ಆಗಿದ್ದು, ಈ ಕುರಿತು ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ತಸ್ಲಿಂ ಕಾರಿನ ದಾಖಲೆಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ ಕಾರು ಮಾಲೀಕರಿಗೆ ತಿಳಿಸಿದ್ದರು. ಕಾರು ಮತ್ತು ಕಾರಿನ ದಾಖಲೆಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.

ಬಳಿಕ ಕಾರನ್ನು ಪೊಲೀಸ್ ಠಾಣೆಯಿಂದ ಬಿಡಿಸಿಕೊಡಲು ತಸ್ಲಿಂ 50,000 ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ದೂರುದಾರರು ತನ್ನ ವಕೀಲರಲ್ಲಿ ವಿಷಯವನ್ನು ತಿಳಿಸಿದರು. ಆಗ ವಕೀಲರು ಖುದ್ದು ಠಾಣೆಗೆ ಭೇಟಿ ನೀಡಿ ಕಾರನ್ನು ಬಿಟ್ಟುಕೊಡುವಂತೆ ಕೇಳಿಕೊಂಡರು.

ತಸ್ಲೀಮ್ ಕಾರು ಬಿಟ್ಟುಕೊಡುತ್ತೇನೆ ಕಾಗದ ಪತ್ರಗಳಿಗೆ ಸಹಿ ಹಾಕಿ ಎಂದು ತಿಳಿಸಿದರು. ಇದನ್ನು ನಂಬಿದ ಕಾರಿನ ಮಾಲೀಕರು ಸಹಿ ಹಾಕಿದರು.ಕಾರನ್ನು ಸ್ವೀಕರಿಸಿದ್ದಾರೆ ಎಂದು ಸಹಿ ಪಡೆದುಕೊಂಡ ತಸ್ಲೀಮ್ ಬಳಿಕ ಕಾರನ್ನು ಬಿಟ್ಟುಕೊಟ್ಟಿರಲಿಲ್ಲ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!