ಮಂಗಳೂರು: ಅಪಘಾತಗೊಂಡ ಕಾರು ಠಾಣೆಯಿಂದ ಬಿಡಿಸಿಕೊಳ್ಳಲು 50,000 ಲಂಚಕ್ಕೆ ಬೇಡಿಕೆ ಇಟ್ಟು, ಕೆಲವು ದಿನಗಳ ಚೌಕಾಸಿ ನಡೆದು, 5000 ರೂಪಾಯಿಗೆ ಒಪ್ಪಿ ಅದನ್ನು ಸ್ವೀಕರಿಸುವಾಗ ಕದ್ರಿ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ತಸ್ಲಿಂ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಸಿಬ್ಬಂದಿ.ಕಾರು ಮತ್ತು ಸ್ಕೂಟರ್ ಮದ್ಯೆ ನಂತೂರು ಸರ್ಕಲ್ನಲ್ಲಿ ಅಪಘಾತ ಆಗಿದ್ದು, ಈ ಕುರಿತು ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ತಸ್ಲಿಂ ಕಾರಿನ ದಾಖಲೆಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ ಕಾರು ಮಾಲೀಕರಿಗೆ ತಿಳಿಸಿದ್ದರು. ಕಾರು ಮತ್ತು ಕಾರಿನ ದಾಖಲೆಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.
ಬಳಿಕ ಕಾರನ್ನು ಪೊಲೀಸ್ ಠಾಣೆಯಿಂದ ಬಿಡಿಸಿಕೊಡಲು ತಸ್ಲಿಂ 50,000 ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ದೂರುದಾರರು ತನ್ನ ವಕೀಲರಲ್ಲಿ ವಿಷಯವನ್ನು ತಿಳಿಸಿದರು. ಆಗ ವಕೀಲರು ಖುದ್ದು ಠಾಣೆಗೆ ಭೇಟಿ ನೀಡಿ ಕಾರನ್ನು ಬಿಟ್ಟುಕೊಡುವಂತೆ ಕೇಳಿಕೊಂಡರು.
ತಸ್ಲೀಮ್ ಕಾರು ಬಿಟ್ಟುಕೊಡುತ್ತೇನೆ ಕಾಗದ ಪತ್ರಗಳಿಗೆ ಸಹಿ ಹಾಕಿ ಎಂದು ತಿಳಿಸಿದರು. ಇದನ್ನು ನಂಬಿದ ಕಾರಿನ ಮಾಲೀಕರು ಸಹಿ ಹಾಕಿದರು.ಕಾರನ್ನು ಸ್ವೀಕರಿಸಿದ್ದಾರೆ ಎಂದು ಸಹಿ ಪಡೆದುಕೊಂಡ ತಸ್ಲೀಮ್ ಬಳಿಕ ಕಾರನ್ನು ಬಿಟ್ಟುಕೊಟ್ಟಿರಲಿಲ್ಲ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…