ವಿಶೇಷ ವರದಿ

ಮನಸಾರೆ ನಕ್ಕಿದ್ದು ಆಗ ಮಾತ್ರ..! || ನೆಮ್ಮದಿಯ ತಾಣ ಆ ಬಾಲ್ಯವೇ ಚೆಂದವಿತ್ತು..!!

ಪ್ರಸ್ತುತ ನಮ್ಮ ಬದುಕು ಚಿಂತೆ, ಜಂಜಾಟಗಳಿಂದಲೇ ತುಂಬಿ ಹೋಗಿ ನಗು, ನೆಮ್ಮದಿ ಎಂಬುದು ಮರುಭೂಮಿಯಲ್ಲಿ ಸುರಿಯುವ ಮಳೆಯಂತೆ ಅಪರೂಪವಾಗಿಬಿಟ್ಟಿದೆ.. ಎಳೆಯವಯಸ್ಸಿನಲ್ಲಿ, “ಒಮ್ಮೆ ಬೆಳೆದು ದೊಡ್ಡವನಾಗಿ ಬಿಡಬೇಕು, ಈ ಶಾಲೆ, ಶಿಕ್ಷಣ ಎಂಬ ಬಂಧನಗಳಿಂದ ಹೊರಬಂದು ಹಾರುವ ಹಕ್ಕಿಯಂತೆ ಸ್ವತಂತ್ರನಾಗಬೇಕು” ಎಂಬೆಲ್ಲ ಬಯಕೆಗಳಿತ್ತು.. ಆದರೆ ಬೆಳೆದ ಈ ವಯಸ್ಸಿನಲ್ಲಿ ಮನಸು ಮತ್ತದೇ ಬಾಲ್ಯದ ಮಗುವಾಗುವ ಅಭಿಲಾಷೆ ವ್ಯಕ್ತಪಡಿಸುತ್ತಿದೆ.. ಕಾರಣ ಆ ದಿನಗಳಲ್ಲಿ ನೆಮ್ಮದಿಗೆ ಕೊರತೆ ಇರಲಿಲ್ಲ ಮತ್ತು ಚಿಂತೆ ಇಲ್ಲದೆ ಮನಸಾರೆ ನಾವೆಲ್ಲ ನಕ್ಕಿದ್ದು ಆಗ ಮಾತ್ರ ಅನ್ನಿಸುತ್ತದೆ.

ಹೌದು ಆಗೆಲ್ಲ ಭವಿಷ್ಯದ ಚಿಂತೆಯಿರಲಿಲ್ಲ, ಮುಂದೇನು ಎನ್ನುವ ದೊಡ್ಡದೊಂದು ಪ್ರಶ್ನಾನಾರ್ಥಕ ಚಿಹ್ನೆ ನಮ್ಮನ್ನು ಆವರಿಸಿರಲಿಲ್ಲ. ವರ್ತಮಾನವನ್ನು ಆನಂದಿಸುವ, ಆ ಕ್ಷಣವನ್ನು ಉತ್ಸಾಹದಿಂದ ಸವಿಯುವ ಹುಮ್ಮಸ್ಸು ದುಪ್ಪಟ್ಟಿತ್ತು. ಈಗೆಲ್ಲ ಭವಿಷ್ಯದ ಚಿಂತೆಯ ಜೊತೆಗೆ ಹಿಂದೆ ಮಾಡಿದ ತಪ್ಪಿನ ಬಗ್ಗೆ ಯೋಚಿಸುತ್ತಾ ಇರುವ ಸಮಯವನ್ನು ಆನಂದಿಸುವುದನ್ನು ಕೂಡ ನಾವುಗಳು ಮರೆತುಬಿಟ್ಟಿದ್ದೇವೆ. ಕೆಲಸ, ಶಿಕ್ಷಣ ಎಂದೆಲ್ಲ ತೀರಾ ಬ್ಯುಸಿಯಾಗಿ, ನೂರಾರು ಚಿಂತೆಗಳನ್ನು ತಲೆಯಲ್ಲಿ ತುಂಬಿಕೊಂಡು ಸರಿಯಾಗಿ ನಿದ್ರಿಸದೆ ಅರೋಗ್ಯ ಕೆಡಿಸಿಕೊಳ್ಳುವುದೇ ಸದ್ಯ ಲೈಫ್ ಸ್ಟೈಲ್ ಆಗಿ ಬಿಟ್ಟಿದೆ. ಸಂಪಾದನೆ, ಸಾಧನೆ ಎಂದೆಲ್ಲ ಒದ್ದಾಡುವ ನಾವುಗಳು ನಗುವುದನ್ನೇ ಮರೆತುಬಿಟ್ಟಿದ್ದೇವೆ. ನೆಮ್ಮದಿ ಎಂಬ ಪದದಿಂದ ಕಿಲೋಮೀಟರ್ ಗಟ್ಟಲೆ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದೇವೆ.

ಬಾಲ್ಯದ ಆ ದಿನಗಳಲ್ಲಿ ಕಿಸೆ ಖಾಲಿಯಿರುತಿತ್ತು ಆದರೆ ಮನಸು ನೆಮ್ಮದಿಯಿಂದ ತುಂಬಿರುತಿತ್ತು. ಅದೇ ಇಂದು ಕಿಸೆ ತುಂಬಿದೆ ಆದರೆ ಮನವೆಂಬ ಬಲೂನು ನೆಮ್ಮದಿಯ ಗಾಳಿಯಿಲ್ಲದೆ ದುರ್ಬಲಗೊಂಡಿದೆ. ಹಣ್ಣ ಸುರಿದು ನೆಮ್ಮದಿ ಬಯಸುವ ನಾವುಗಳು ಬಾಲ್ಯದಲ್ಲಿ ಸಣ್ಣಪುಟ್ಟ ವಿಷಯಗಳಲ್ಲಿ ಖುಷಿ ಹುಡುಕುತ್ತಿದ್ದ ಬಗೆಯನ್ನು ಮರೆತೇ ಬಿಟ್ಟಿದ್ದೇವೆ. ಎಷ್ಟು ಕೊಟ್ಟರು ಇನ್ನೂ ಬೇಕು ಎನ್ನುವ ಆಕಾ0ಕ್ಷಿಗಳಾಗಿರುವ ನಾವುಗಳು ಬಾಲ್ಯದಲ್ಲಿ ಇದ್ದ ವಸ್ತುಗಳಲ್ಲೇ ಎಲ್ಲಿಲ್ಲದ ಖುಷಿಪಡುತ್ತಿದ್ದ ದಿನಗಳನ್ನು ನೆನಪಿಸಿಕೊಳ್ಳಬೇಕಿದೆ.

ಸರಕಾರಿ ಶಾಲೆಯಲ್ಲಿ ಬಾಲ್ಯದ ಶಿಕ್ಷಣ ಪೂರೈಸಿದ ನನ್ನಂತವನಿಗೆ ಆ ಹಳೆಯ ಹಂಚಿನ ಕಟ್ಟಡ ಕೊಟ್ಟಷ್ಟು ನೆಮ್ಮದಿ, ಸಂತೋಷ ಜಗತ್ತಿನ ಬೇರಾವುದೇ ಜಾಗ ನೀಡಿಲ್ಲ ಮತ್ತು ನೀಡುವುದು ಇಲ್ಲ ಪ್ರಯಾಷಃ ಇತರರನ್ನು ಮೆಚ್ಚಿಸಲು ನೋವಿದ್ದರೂ ನಗುವ ಹಾಗೇ ನಟಿಸಬೇಕಾದ ಈ ಕಾಲಕ್ಕಿಂತ, ಮುಗ್ಧತೆ ಮತ್ತು ಸ್ವತಂತ್ರಯುತವಾಗಿ ವ್ಯಕ್ತವಾಗುತ್ತಿದ್ದ ಬಾಲ್ಯದ ಭಾವನೆಗಳೇ ಚೆಂದವಿತ್ತು.. ಚಿಂತೆ ಎಂಬ ಪದದ ಅರ್ಥ ತಿಳಿಯದೆ ಕಳೆದ ಬಾಲ್ಯ ಚಿಂತೆಯಿಂದಲೇ ಬದುಕು ತುಂಬಿಕೊಂಡ ಈ ಕಾಲಕ್ಕೆ ಎಟುಕದಷ್ಟು ದೂರವಾಗಿಬಿಟ್ಟಿದೆ..


ಆಟ -ಪಾಠಗಳೊಂದಿಗೆ ತರ್ಲೆ ತುಂಟಾಟಗಳು, ಪೆಟ್ಟು -ಬೈಗುಳಗಳ ಹಿಂದೆ ಇರುತ್ತಿದ್ದ ಶಿಕ್ಷಕರ ಕಾಳಜಿ ಪ್ರೀತಿಗಳು, ಮಧ್ಯಾಹ್ನದ ಬಿಸಿಯೂಟ, ಅಡುಗೆ ಸಿಬ್ಬಂದಿಗಳೊಂದಿಗಿನ ಭಾಂಧವ್ಯ, ಶಾಲೆ ಎದುರಿನ ಸಾಹೇಬರ ಅಂಗಡಿ, ಶೆಟ್ಟರ ಮನೆಯಲ್ಲಿ ಕದ್ದು ತಿಂದ ಮಾವಿನಹಣ್ಣು, ಮಳೆಯಲ್ಲಿ ನೆನೆದುಕೊಂಡು ಬಂದು ಅಮ್ಮನ ಬಾಯಲ್ಲಿ ಕೇಳುತ್ತಿದ್ದ ಬೈಗುಳಗಳು ಎಲ್ಲವೂ ಈಗ ಕಳೆದ ಸಮಯ ಕೊಟ್ಟ ನೆನೆಪುಗಳಷ್ಟೇ.. ತೀರಾ ದೊಡ್ಡವರಾಗಿ ಬೆಳೆದು ಪಡೆದುಕೊಂಡದ್ದು ಚಿಂತೆ, ಜಂಜಾಟಗಳಿಂದ ಕಳೆದುಕೊಂಡದ್ದು ನೆಮ್ಮದಿಯನ್ನು.. ಜೀವನದ ಜಂಜಾಟದಲ್ಲಿ ಬಳಲಿ ಬೆಂಡಾದ ಮನಸು ಮತ್ತೆ ಬಾಲ್ಯದ ನೆಮ್ಮದಿಯನ್ನು ಬಯಸಿದೆ. ಯಾಕೆಂದರೆ ಜವಾಬ್ದಾರಿಗಳ ಒತ್ತಡವಿಲ್ಲದೆ, ಚಿಂತೆ ಎಂಬ ಪದದ ಅರ್ಥ ತಿಳಿಯದೆ ನಾವೆಲ್ಲ ಮನಸಾರೆ ನಕ್ಕಿದ್ದು ಆಗ ಮಾತ್ರ..

                                                                                                                                                                                                                                                   ಚೇತನ್ ಕಾಶಿಪಟ್ನ

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

2 days ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

2 days ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

2 days ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

2 days ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

2 days ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

2 days ago