ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಏಳನೇ ವಯಸ್ಸಿಗೆ ಸಾಧನೆಗೈತ್ತಿರುವ ಸುಭಿಕ್ಷಾ ಅನಿಲ್

ದೃಢ ಸಂಕಲ್ಪ ಮತ್ತು ಆತ್ಮವಿಶ್ವಾಸವಿದ್ದರೆ ಸಾಧನೆಯ ಶಿಖರವೇರಲು, ಸಾಧಿಸಿ ಸೈ ಎನಿಸಿಕೊಳ್ಳಲು ಯಾವ ವಯಸ್ಸಿನ ಪರಿಮಿತಿಯು ಇರುವುದಿಲ್ಲ. ಈ ಮಾತಿಗೆ ನಿದರ್ಶನವೆಂಬಂತೆ ಮಂಗಳೂರು ಮೂಲದ ಅನಿಲ್ ಕುಮಾರ್ ಮತ್ತು ಶ್ರೀಮತಿ ಶೈಲಜಾ ದಂಪತಿಯ ಸುಪುತ್ರಿ ಏಳರ ಪೋರಿ ಸುಭಿಕ್ಷ ಅನಿಲ್ ನಮ್ಮ ಕಣ್ಣ ಮುಂದೆ ನಿಲ್ಲುತ್ತಾಳೆ.

ನೃತ್ಯ, ಚಿತ್ರಕಲೆ, ಗಾಯನ ಹೀಗೆ ಎಲ್ಲಾ ಕ್ಷೇತ್ರದಲ್ಲೂ ಕಿರಿವಯಸ್ಸಿನಲ್ಲಿಯೇ ಸಾಧನೆಗೆ ಮುತ್ತಿಕ್ಕಿರುವ ಸುಭಿಕ್ಷ ಪ್ರಸ್ತುತ ಮುಂಡುಗೋಡದ ಬ್ಲೂಮಿಂಗ್ ಬರ್ಡ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ.

ಮೂರನೇ ವಯಸ್ಸಿನಿಂದಲೇ ಭರತನಾಟ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಈ ಕಿರಿಸಾಧಕಿ ನಾಟ್ಯಮಯೂರಿ ನೃತ್ಯ ಕಲಾಕೇಂದ್ರದ ಶ್ರೀಮತಿ ಶಶಿರೇಖಾ ಬೈಜು ಗರಡಿಯಲ್ಲಿ ಪಳಗಿದ್ದಾಳೆ. ಇನ್ನೂ ಸಂಗೀತವನ್ನು ಶ್ರೀಮತಿ ರೇಖಾ ಮರಾಟೆ ಬಳಿಯಲ್ಲಿ ಮತ್ತು ಕರಾಟೆಯನ್ನು ಸುರೇಂದ್ರ ನಾಸರ್ಗಿ ಗರಡಿಯಲ್ಲಿ ಅಭ್ಯಾಸ ಮಾಡುತ್ತಿದ್ದಾಳೆ. ಯೋಗಾಸನದ ಎರಡು ಭಂಗಿಗಳಲ್ಲಿ ಗೀಸಾ ಬುಕ್ ಆಫ್ ರೆಕಾರ್ಡ್ ಮಾಡಿರುವ ಈ ಕಿರಿಸಾಧಕಿ ಹತ್ತು ಹಲವಾರು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾಳೆ.

ವಾಯ್ಸ್ ಆಫ್ ಆರಾಧನ ತಂಡದ ಸಕ್ರಿಯ ಸದಸ್ಯೆ ಯಾಗಿರುವ ಸುಭಿಕ್ಷಾ ಪ್ರತಿಭೆಗೆ ಸೇವಾ ರತ್ನ ಪ್ರಶಸ್ತಿ, ಕಲಾ ರತ್ನ ಪ್ರಶಸ್ತಿ, ಸುವರ್ಣ ಕರ್ನಾಟಕ ನಾಟ್ಯಮಯೂರಿ ಬಾಲ ಗೌರವ ರಾಜ್ಯ ಪ್ರಶಸ್ತಿ ಹೀಗೆ ಹತ್ತು ಹಲವಾರು ಪ್ರಶಸ್ತಿಗಳು ಲಭಿಸಿವೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!