ದೃಢ ಸಂಕಲ್ಪ ಮತ್ತು ಆತ್ಮವಿಶ್ವಾಸವಿದ್ದರೆ ಸಾಧನೆಯ ಶಿಖರವೇರಲು, ಸಾಧಿಸಿ ಸೈ ಎನಿಸಿಕೊಳ್ಳಲು ಯಾವ ವಯಸ್ಸಿನ ಪರಿಮಿತಿಯು ಇರುವುದಿಲ್ಲ. ಈ ಮಾತಿಗೆ ನಿದರ್ಶನವೆಂಬಂತೆ ಮಂಗಳೂರು ಮೂಲದ ಅನಿಲ್ ಕುಮಾರ್ ಮತ್ತು ಶ್ರೀಮತಿ ಶೈಲಜಾ ದಂಪತಿಯ ಸುಪುತ್ರಿ ಏಳರ ಪೋರಿ ಸುಭಿಕ್ಷ ಅನಿಲ್ ನಮ್ಮ ಕಣ್ಣ ಮುಂದೆ ನಿಲ್ಲುತ್ತಾಳೆ.
ನೃತ್ಯ, ಚಿತ್ರಕಲೆ, ಗಾಯನ ಹೀಗೆ ಎಲ್ಲಾ ಕ್ಷೇತ್ರದಲ್ಲೂ ಕಿರಿವಯಸ್ಸಿನಲ್ಲಿಯೇ ಸಾಧನೆಗೆ ಮುತ್ತಿಕ್ಕಿರುವ ಸುಭಿಕ್ಷ ಪ್ರಸ್ತುತ ಮುಂಡುಗೋಡದ ಬ್ಲೂಮಿಂಗ್ ಬರ್ಡ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ.
ಮೂರನೇ ವಯಸ್ಸಿನಿಂದಲೇ ಭರತನಾಟ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಈ ಕಿರಿಸಾಧಕಿ ನಾಟ್ಯಮಯೂರಿ ನೃತ್ಯ ಕಲಾಕೇಂದ್ರದ ಶ್ರೀಮತಿ ಶಶಿರೇಖಾ ಬೈಜು ಗರಡಿಯಲ್ಲಿ ಪಳಗಿದ್ದಾಳೆ. ಇನ್ನೂ ಸಂಗೀತವನ್ನು ಶ್ರೀಮತಿ ರೇಖಾ ಮರಾಟೆ ಬಳಿಯಲ್ಲಿ ಮತ್ತು ಕರಾಟೆಯನ್ನು ಸುರೇಂದ್ರ ನಾಸರ್ಗಿ ಗರಡಿಯಲ್ಲಿ ಅಭ್ಯಾಸ ಮಾಡುತ್ತಿದ್ದಾಳೆ. ಯೋಗಾಸನದ ಎರಡು ಭಂಗಿಗಳಲ್ಲಿ ಗೀಸಾ ಬುಕ್ ಆಫ್ ರೆಕಾರ್ಡ್ ಮಾಡಿರುವ ಈ ಕಿರಿಸಾಧಕಿ ಹತ್ತು ಹಲವಾರು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾಳೆ.
ವಾಯ್ಸ್ ಆಫ್ ಆರಾಧನ ತಂಡದ ಸಕ್ರಿಯ ಸದಸ್ಯೆ ಯಾಗಿರುವ ಸುಭಿಕ್ಷಾ ಪ್ರತಿಭೆಗೆ ಸೇವಾ ರತ್ನ ಪ್ರಶಸ್ತಿ, ಕಲಾ ರತ್ನ ಪ್ರಶಸ್ತಿ, ಸುವರ್ಣ ಕರ್ನಾಟಕ ನಾಟ್ಯಮಯೂರಿ ಬಾಲ ಗೌರವ ರಾಜ್ಯ ಪ್ರಶಸ್ತಿ ಹೀಗೆ ಹತ್ತು ಹಲವಾರು ಪ್ರಶಸ್ತಿಗಳು ಲಭಿಸಿವೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…