ಮಳೆಗಾಲ ಬಂತೆಂದರೆ ಕೇವಲ ನೀರಿನ ಸಮಸ್ಯೆ ಮಾತ್ರವಲ್ಲ, ಕೆಲವೊಮ್ಮೆ ಅದಕ್ಕಿಂತ ಅಪಾಯಕಾರಿ ಅತಿಥಿ ಮನೆಯೊಳಗೆ, ಬೈಕೊಳಗೆ, ಕಾರಿನೊಳಗೆ ಹೀಗೆ ಎಲ್ಲೆಂದರಲ್ಲಿ ಬಂದು ಭೀತಿ ಹುಟ್ಟಿಸಬಹುದು. ಅಷ್ಟಕ್ಕೂ ಯಾರು ಈ ಅತಿಥಿ ಅಂತೀರಾ ಹೇಳ್ತೀವಿ ಕೇಳಿ…. ಮಳೆಗಾಲದ ಪ್ರಮುಖ ಅತಿಥಿ ಈ ಹಾವುಗಳು, ಹೌದು, ಮಳೆಯನ್ನು ತಪ್ಪಿಸಲು, ಬಿಸಿ ವಾತಾವರಣವನ್ನು ಅರಸಿಕೊಂಡು ಎಲ್ಲೆಂದರಲ್ಲಿ ನುಗ್ಗಿ ಜನರ ಪ್ರಾಣಕ್ಕೆ ಕಂಟಕ ತರಬಹುದು. ಈ ಹಾವುಗಳಲ್ಲಿ ಕೆಲವೊಂದು ವಿಷವಿಲ್ಲದ ಹಾವುಗಳಿದ್ದರೆ, ಇನ್ನು ಕೆಲವು ವಿಷವಿರುವ ಹಾವುಗಳೂ ಇರುತ್ತವೆ. ಈ ಕಾರಣಕ್ಕಾಗಿಯೇ ಮಳೆಗಾಲದ ಸಮಯದಲ್ಲಿ ಯಾವ ರೀತಿ ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣೆಯ ಸುಬ್ಬಂದಿಗಳಿಗೆ ಕೆಲಸವಿರುತ್ತೋ, ಅದೇ ರೀತಿಯ ಕೆಲಸ ಉರಗತಜ್ಞರಿಗೂ ಇರುತ್ತದೆ.
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಕೆಲವು ಕಡೆ ಕಾಡು, ಕೆಲವು ಕಡೆ ತೋಟ ಹಾಗು ಇನ್ನು ಕೆಲವು ಕಡೆ ನಗರ ಪ್ರದೇಶವನ್ನು ಹೊಂದಿರುವ ಪ್ರದೇಶ. ಕೃಷಿತೋಟ ಮತ್ತು ಕಾಡಿನಂಚಿನಲ್ಲಿರುವ ಮನೆಗಳಿಗೆ ಹಾವುಗಳು ಮಳೆಗಾಲದಲ್ಲಿ ಬರೋದು ಸಾಮಾನ್ಯವಾಗಿದ್ದು, ಇತ್ತೀಚೆಗೆ ದಿನಗಳಲ್ಲಿ ನಗರದ ಮಧ್ಯೆಯೂ ಈ ಹಾವುಗಳ ಸಮಸ್ಯೆ ಕಂಡು ಬರುತ್ತಿದೆ. ಪುತ್ತೂರಿನ ಜಿ.ಎಲ್ ಕಾಂಪ್ಲೆಕ್ಸ್ ಬಳಿ ನಿಲ್ಲಿಸಿದ್ದ ಬೈಕ್ ಒಂದಕ್ಕೆ ನಾಗರಹಾವಿನ ಮರಿಯೊಂದು ನುಗ್ಗಿ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಜನ ಎಷ್ಟೇ ಪ್ರಯತ್ನ ಪಟ್ಟರೂ ಹಾವಿನ ಮರಿಯನ್ನು ಬೈಕ್ ನಿಂದ ಹೊರಗಡೆ ಓಡಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಪುತ್ತೂರಿನ ಉರಗತಜ್ಞ ತೇಜಸ್ ಬನ್ನೂರಿಗೆ ಸ್ಥಳೀಯರು ಕರೆ ಮಾಡಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ನಾಗರಹಾವಿನ ಮರಿಯನ್ನು ಹುಡುಕಾಡಿದ ತೇಜಸ್ ಗೆ ಹಾವು ಬೈಕ್ ನ ಹೆಡ್ ಲೈಟ್ ಪಕ್ಕದಲ್ಲಿ ಬೆಚ್ಚನೆ ಕುಳಿತಿರೋದು ಪತ್ತೆಯಾಗಿದೆ. ಆ ವೇಳೆಗಾಗಲೇ ಬೈಕ್ನ ಎಲ್ಲಾ ಪಾರ್ಟ್ಗಳನ್ನು ಬಿಡಿಸಿ, ಕೇವಲ ಬೈಕ್ ಅಸ್ತಿಪಂಜರ ಮಾತ್ರ ಕಾಣುವ ಹಂತಕ್ಕೆ ತಲುಪಿತ್ತು.
ಬೈಕ್ನಿಂದ ನಾಗರಹಾವಿನ ಮರಿಯನ್ನು ತೆಗೆದ ತಕ್ಷಣವೇ ಮನೆಯೊಂದರ ಬೆಡ್ ರೂಂ ಗೆ ನಾಗರಹಾವು ನುಗ್ಗಿದ ಬಗ್ಗೆ ಕರೆ ಬಂದಿದೆ. ಹಾವಿನ ಮರಿಯನ್ನು ಪ್ಲಾಸ್ಟಿಕ್ ಬಾಟಲಿಯಲ್ಲಿ ತುಂಬಿಸಿ, ಕರೆ ಬಂದ ಮನೆಗೆ ತೆರಳಿ, ಅಲ್ಲಿದ್ದ ನಾಗರಹಾವನ್ನು ರಕ್ಷಣೆ ಮಾಡಲಾಗಿದೆ. ಮಳೆಗಾಲದ ಸಮಯದಲ್ಲಿ ಹಾವುಗಳು ಬೆಚ್ಚಗಿನ ವಾತಾವರಣ ಹುಡುಕಿಕೊಂಡು ಹೋಗೋದು ಸಾಮಾನ್ಯ. ಈ ಸಂದರ್ಭದಲ್ಲಿ ಜನರು ಗಾಬರಿಪಡದೆ ಹಾವುಗಳನ್ನು ಸುರಕ್ಷಿತವಾಗಿ ರಕ್ಷಣೆ ಮಾಡುವ ಕೆಲಸವನ್ನು ಮಾಡಬೇಕು ಎಂದು ತೇಜಸ್ ಬನ್ನೂರು ಮನವಿ ಮಾಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…