ಮಳೆಗಾಲ ಬಂತೆಂದರೆ ಕೇವಲ ನೀರಿನ ಸಮಸ್ಯೆ ಮಾತ್ರವಲ್ಲ, ಕೆಲವೊಮ್ಮೆ ಅದಕ್ಕಿಂತ ಅಪಾಯಕಾರಿ ಅತಿಥಿ ಮನೆಯೊಳಗೆ, ಬೈಕೊಳಗೆ, ಕಾರಿನೊಳಗೆ ಹೀಗೆ ಎಲ್ಲೆಂದರಲ್ಲಿ ಬಂದು ಭೀತಿ ಹುಟ್ಟಿಸಬಹುದು. ಅಷ್ಟಕ್ಕೂ ಯಾರು ಈ ಅತಿಥಿ ಅಂತೀರಾ ಹೇಳ್ತೀವಿ ಕೇಳಿ…. ಮಳೆಗಾಲದ ಪ್ರಮುಖ ಅತಿಥಿ ಈ ಹಾವುಗಳು, ಹೌದು, ಮಳೆಯನ್ನು ತಪ್ಪಿಸಲು, ಬಿಸಿ ವಾತಾವರಣವನ್ನು ಅರಸಿಕೊಂಡು ಎಲ್ಲೆಂದರಲ್ಲಿ ನುಗ್ಗಿ ಜನರ ಪ್ರಾಣಕ್ಕೆ ಕಂಟಕ ತರಬಹುದು. ಈ ಹಾವುಗಳಲ್ಲಿ ಕೆಲವೊಂದು ವಿಷವಿಲ್ಲದ ಹಾವುಗಳಿದ್ದರೆ, ಇನ್ನು ಕೆಲವು ವಿಷವಿರುವ ಹಾವುಗಳೂ ಇರುತ್ತವೆ. ಈ ಕಾರಣಕ್ಕಾಗಿಯೇ ಮಳೆಗಾಲದ ಸಮಯದಲ್ಲಿ ಯಾವ ರೀತಿ ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣೆಯ ಸುಬ್ಬಂದಿಗಳಿಗೆ ಕೆಲಸವಿರುತ್ತೋ, ಅದೇ ರೀತಿಯ ಕೆಲಸ ಉರಗತಜ್ಞರಿಗೂ ಇರುತ್ತದೆ.
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಕೆಲವು ಕಡೆ ಕಾಡು, ಕೆಲವು ಕಡೆ ತೋಟ ಹಾಗು ಇನ್ನು ಕೆಲವು ಕಡೆ ನಗರ ಪ್ರದೇಶವನ್ನು ಹೊಂದಿರುವ ಪ್ರದೇಶ. ಕೃಷಿತೋಟ ಮತ್ತು ಕಾಡಿನಂಚಿನಲ್ಲಿರುವ ಮನೆಗಳಿಗೆ ಹಾವುಗಳು ಮಳೆಗಾಲದಲ್ಲಿ ಬರೋದು ಸಾಮಾನ್ಯವಾಗಿದ್ದು, ಇತ್ತೀಚೆಗೆ ದಿನಗಳಲ್ಲಿ ನಗರದ ಮಧ್ಯೆಯೂ ಈ ಹಾವುಗಳ ಸಮಸ್ಯೆ ಕಂಡು ಬರುತ್ತಿದೆ. ಪುತ್ತೂರಿನ ಜಿ.ಎಲ್ ಕಾಂಪ್ಲೆಕ್ಸ್ ಬಳಿ ನಿಲ್ಲಿಸಿದ್ದ ಬೈಕ್ ಒಂದಕ್ಕೆ ನಾಗರಹಾವಿನ ಮರಿಯೊಂದು ನುಗ್ಗಿ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಜನ ಎಷ್ಟೇ ಪ್ರಯತ್ನ ಪಟ್ಟರೂ ಹಾವಿನ ಮರಿಯನ್ನು ಬೈಕ್ ನಿಂದ ಹೊರಗಡೆ ಓಡಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಪುತ್ತೂರಿನ ಉರಗತಜ್ಞ ತೇಜಸ್ ಬನ್ನೂರಿಗೆ ಸ್ಥಳೀಯರು ಕರೆ ಮಾಡಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ನಾಗರಹಾವಿನ ಮರಿಯನ್ನು ಹುಡುಕಾಡಿದ ತೇಜಸ್ ಗೆ ಹಾವು ಬೈಕ್ ನ ಹೆಡ್ ಲೈಟ್ ಪಕ್ಕದಲ್ಲಿ ಬೆಚ್ಚನೆ ಕುಳಿತಿರೋದು ಪತ್ತೆಯಾಗಿದೆ. ಆ ವೇಳೆಗಾಗಲೇ ಬೈಕ್ನ ಎಲ್ಲಾ ಪಾರ್ಟ್ಗಳನ್ನು ಬಿಡಿಸಿ, ಕೇವಲ ಬೈಕ್ ಅಸ್ತಿಪಂಜರ ಮಾತ್ರ ಕಾಣುವ ಹಂತಕ್ಕೆ ತಲುಪಿತ್ತು.
ಬೈಕ್ನಿಂದ ನಾಗರಹಾವಿನ ಮರಿಯನ್ನು ತೆಗೆದ ತಕ್ಷಣವೇ ಮನೆಯೊಂದರ ಬೆಡ್ ರೂಂ ಗೆ ನಾಗರಹಾವು ನುಗ್ಗಿದ ಬಗ್ಗೆ ಕರೆ ಬಂದಿದೆ. ಹಾವಿನ ಮರಿಯನ್ನು ಪ್ಲಾಸ್ಟಿಕ್ ಬಾಟಲಿಯಲ್ಲಿ ತುಂಬಿಸಿ, ಕರೆ ಬಂದ ಮನೆಗೆ ತೆರಳಿ, ಅಲ್ಲಿದ್ದ ನಾಗರಹಾವನ್ನು ರಕ್ಷಣೆ ಮಾಡಲಾಗಿದೆ. ಮಳೆಗಾಲದ ಸಮಯದಲ್ಲಿ ಹಾವುಗಳು ಬೆಚ್ಚಗಿನ ವಾತಾವರಣ ಹುಡುಕಿಕೊಂಡು ಹೋಗೋದು ಸಾಮಾನ್ಯ. ಈ ಸಂದರ್ಭದಲ್ಲಿ ಜನರು ಗಾಬರಿಪಡದೆ ಹಾವುಗಳನ್ನು ಸುರಕ್ಷಿತವಾಗಿ ರಕ್ಷಣೆ ಮಾಡುವ ಕೆಲಸವನ್ನು ಮಾಡಬೇಕು ಎಂದು ತೇಜಸ್ ಬನ್ನೂರು ಮನವಿ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…