ಮಂಗಳೂರಿನಲ್ಲಿ ಸರಣಿ ಕೊಲೆ ಮತ್ತು ಆನಂತರ ಬೆಳವಣಿಗೆಯ ಪರಿಣಾಮ ಕೋಮು ದ್ವೇಷದ ವಾತಾವರಣ ನಿರ್ಮಾಣಗೊಂಡಿದ್ದರಿಂದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವತಿಯಿಂದ ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಸರ್ವಧರ್ಮಗಳ ಪ್ರಮುಖರು, ಸಂಘ-ಸಂಸ್ಥೆಗಳ ಪ್ರಮುಖರು, ಶಾಸಕರ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಲಾಯಿತು.
ಹಲವು ಪ್ರಮುಖರು ತಮ್ಮವಿಚಾರಗಳನ್ನು ಹೇಳಿ ಶಾಂತಿ ಸೌಹಾರ್ದಕ್ಕೆ ಏನೇನು ಆಗಬೇಕೆಂದು ಸಲಹೆಗಳನ್ನು ನೀಡಿದ್ದಾರೆ. ಎಳೆಯ ಮಕ್ಕಳಲ್ಲಿ ವಿಷಬೀಜ ಬಿತ್ತಬೇಡಿ. ದೇವಸ್ಥಾನ, ಮಸೀದಿ, ಚರ್ಚುಗಳಲ್ಲಿ ನಮ್ಮ ಪೂಜಾಪದ್ಧತಿಯೇ ಶ್ರೇಷ್ಠ ನಮ್ಮ ಧರ್ಮವೇ ಶ್ರೇಷ್ಠ ಉಳಿದದ್ದೆಲ್ಲ ಕನಿಷ್ಠ ಎಂದು ಬೋಧಿಸುವುದು ಮಕ್ಕಳ ಮನಸ್ಸಿನಲ್ಲಿ ಮೂಲಭೂತವಾದ ಬಿತ್ತುತ್ತದೆ. ಎಲ್ಲರ ಮನೆಗಳಲ್ಲಿ, ಎಲ್ಲ ಕಡೆಯ ಶಾಲೆಗಳಲ್ಲೂ ಎಲ್ಲ ಧರ್ಮಗಳೂ ಒಂದೇ ಎನ್ನುವ ಸೌಹಾರ್ದ ಭಾವನೆ ಬಿತ್ತಬೇಕು. ಹಾಗಾದಾಗ ಮಾತ್ರ ಶಾಂತಿ, ಸಾಮರಸ್ಯ ನೆಲೆಸಬಹುದು ಎಂದು ವಿಶ್ವ ಹಿಂದು ಪರಿಷತ್ ಪ್ರಮುಖ, ಶಾರದಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂಬಿ ಪುರಾಣಿಕ್ ಹೇಳಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…