ಮಂಗಳೂರಿನಲ್ಲಿ ಸರಣಿ ಕೊಲೆ ಮತ್ತು ಆನಂತರ ಬೆಳವಣಿಗೆಯ ಪರಿಣಾಮ ಕೋಮು ದ್ವೇಷದ ವಾತಾವರಣ ನಿರ್ಮಾಣಗೊಂಡಿದ್ದರಿಂದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವತಿಯಿಂದ ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಸರ್ವಧರ್ಮಗಳ ಪ್ರಮುಖರು, ಸಂಘ-ಸಂಸ್ಥೆಗಳ ಪ್ರಮುಖರು, ಶಾಸಕರ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಲಾಯಿತು.
ಹಲವು ಪ್ರಮುಖರು ತಮ್ಮವಿಚಾರಗಳನ್ನು ಹೇಳಿ ಶಾಂತಿ ಸೌಹಾರ್ದಕ್ಕೆ ಏನೇನು ಆಗಬೇಕೆಂದು ಸಲಹೆಗಳನ್ನು ನೀಡಿದ್ದಾರೆ. ಎಳೆಯ ಮಕ್ಕಳಲ್ಲಿ ವಿಷಬೀಜ ಬಿತ್ತಬೇಡಿ. ದೇವಸ್ಥಾನ, ಮಸೀದಿ, ಚರ್ಚುಗಳಲ್ಲಿ ನಮ್ಮ ಪೂಜಾಪದ್ಧತಿಯೇ ಶ್ರೇಷ್ಠ ನಮ್ಮ ಧರ್ಮವೇ ಶ್ರೇಷ್ಠ ಉಳಿದದ್ದೆಲ್ಲ ಕನಿಷ್ಠ ಎಂದು ಬೋಧಿಸುವುದು ಮಕ್ಕಳ ಮನಸ್ಸಿನಲ್ಲಿ ಮೂಲಭೂತವಾದ ಬಿತ್ತುತ್ತದೆ. ಎಲ್ಲರ ಮನೆಗಳಲ್ಲಿ, ಎಲ್ಲ ಕಡೆಯ ಶಾಲೆಗಳಲ್ಲೂ ಎಲ್ಲ ಧರ್ಮಗಳೂ ಒಂದೇ ಎನ್ನುವ ಸೌಹಾರ್ದ ಭಾವನೆ ಬಿತ್ತಬೇಕು. ಹಾಗಾದಾಗ ಮಾತ್ರ ಶಾಂತಿ, ಸಾಮರಸ್ಯ ನೆಲೆಸಬಹುದು ಎಂದು ವಿಶ್ವ ಹಿಂದು ಪರಿಷತ್ ಪ್ರಮುಖ, ಶಾರದಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂಬಿ ಪುರಾಣಿಕ್ ಹೇಳಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…