ಜನ ಮನದ ನಾಡಿ ಮಿಡಿತ

Advertisement

ಪಜೀರು: ಪ್ರತೀ ತಾಲೂಕಿನಲ್ಲೂ ಅಗ್ನಿಶಾಮಕ ಠಾಣೆ: ಗೃಹ ಸಚಿವ ಪರಮೇಶ್ವರ್

ಪ್ರತೀ ತಾಲೂಕಿನಲ್ಲೂ ಅಗ್ನಿಶಾಮಕ ಠಾಣೆ ನಿರ್ಮಾಣದ ಯೋಜನೆಯಿದ್ದು, ಈಗಾಗಲೇ 200ಕ್ಕೂ ಹೆಚ್ಚು ಠಾಣೆಗಳು ರಾಜ್ಯದಲ್ಲಿ ಇದ್ದು ಇನ್ನು 30 -40 ಠಾಣೆಗಳನ್ನು ಹಂತ ಹಂತವಾಗಿದೆ ಮಂಜೂರು ಮಾಡಲಾಗಿದೆ. ಈ ಭಾಗದ ಜನರ ಬೇಡಿಕೆಯಂತೆ ಉಳ್ಳಾಲ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದ್ದು, ದ.ಕ ಜಿಲ್ಲೆಯ ಮೂಲ್ಕಿ ಹಾಗೂ ಕಡಬ ತಾಲೂಕಿನಲ್ಲೂ ಶೀಘ್ರದಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣವಾಗಲಿದೆ ಎಂದು ಕರ್ನಾಟಕ ರಾಜ್ಯದ ಗೃಹಸಚಿವ ಡಾ.ಪರಮೇಶ್ವರ್ ಹೇಳಿದ್ದಾರೆ.

ಅವರು ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಕಂಬಳಪದವು ಬಳಿ ನೂತನವಾಗಿ ನಿರ್ಮಾಣವಾಗಲಿರುವ ಅಗ್ನಿಶಾಮಕ ಠಾಣೆಗೆ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದ್ರು. ಅಗ್ನಿಶಾಮಕ ಮತ್ತು ತುರ್ತುಸೇವೆ ಇಲಾಖೆಯ ಸಿಬ್ಬಂದಿಗಳ ಸೇವೆ, ಪರಿಶ್ರಮ ಬಹಳ ಮುಖ್ಯವಾದದ್ದು. ಎಲ್ಲರನ್ನು ರಕ್ಷಣೆಗಾಗಿ ಅಗ್ನಿಶಾಮಕ ದಳ ತಮ್ಮ ಜೀವವನ್ನು ಅಡವಿಟ್ಟು ಬೇರೆಯವರ ರಕ್ಷಣೆ ಮಾಡುತ್ತಾರೆ. ಇಂದಿನ ಆಧುನಿಕತೆಗೆ ಪೂರಕವಾಗಿ ಅನಾಹುತ ಸಂಭವಿಸಿದಾಗ ಜನರ ರಕ್ಷಣೆಗೆ ಹೊಸ ಹೊಸ ಆವಿಷ್ಕಾರಗಳನ್ನು ಮಾಡಿ ಅತ್ಯಾಧುನಿಕ ಯಂತ್ರಗಳು ಹಾಗೂ ಸೌಲಭ್ಯವನ್ನು ಇಲಾಖೆಗೆ ಒದಗಿಸುತ್ತಿದ್ದೇವೆ. ಹಾಗೆಯೇ ನೂತನ ಅಗ್ನಿಶಾಮಕ ವಾಹನ ಖರೀದಿಗೆ 50 ಕೋಟಿ ರೂ.ವನ್ನು ಮುಖ್ಯಮಂತ್ರಿಗಳು ಈಗಾಗಲೇ ಮಂಜೂರು ಮಾಡಿದ್ದಾರೆ. ಕೆಮಿಕಲ್ ಇಂಡಸ್ಟ್ರಿ, ಪೆಟ್ರೋಲ್ ಇಂಡಸ್ಟ್ರಿ ಈ ಭಾಗದಲ್ಲಿ ಇರುವುದರಿಂದ ಈ ಭಾಗಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!