ಪ್ರತೀ ತಾಲೂಕಿನಲ್ಲೂ ಅಗ್ನಿಶಾಮಕ ಠಾಣೆ ನಿರ್ಮಾಣದ ಯೋಜನೆಯಿದ್ದು, ಈಗಾಗಲೇ 200ಕ್ಕೂ ಹೆಚ್ಚು ಠಾಣೆಗಳು ರಾಜ್ಯದಲ್ಲಿ ಇದ್ದು ಇನ್ನು 30 -40 ಠಾಣೆಗಳನ್ನು ಹಂತ ಹಂತವಾಗಿದೆ ಮಂಜೂರು ಮಾಡಲಾಗಿದೆ. ಈ ಭಾಗದ ಜನರ ಬೇಡಿಕೆಯಂತೆ ಉಳ್ಳಾಲ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದ್ದು, ದ.ಕ ಜಿಲ್ಲೆಯ ಮೂಲ್ಕಿ ಹಾಗೂ ಕಡಬ ತಾಲೂಕಿನಲ್ಲೂ ಶೀಘ್ರದಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣವಾಗಲಿದೆ ಎಂದು ಕರ್ನಾಟಕ ರಾಜ್ಯದ ಗೃಹಸಚಿವ ಡಾ.ಪರಮೇಶ್ವರ್ ಹೇಳಿದ್ದಾರೆ.
ಅವರು ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಕಂಬಳಪದವು ಬಳಿ ನೂತನವಾಗಿ ನಿರ್ಮಾಣವಾಗಲಿರುವ ಅಗ್ನಿಶಾಮಕ ಠಾಣೆಗೆ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದ್ರು. ಅಗ್ನಿಶಾಮಕ ಮತ್ತು ತುರ್ತುಸೇವೆ ಇಲಾಖೆಯ ಸಿಬ್ಬಂದಿಗಳ ಸೇವೆ, ಪರಿಶ್ರಮ ಬಹಳ ಮುಖ್ಯವಾದದ್ದು. ಎಲ್ಲರನ್ನು ರಕ್ಷಣೆಗಾಗಿ ಅಗ್ನಿಶಾಮಕ ದಳ ತಮ್ಮ ಜೀವವನ್ನು ಅಡವಿಟ್ಟು ಬೇರೆಯವರ ರಕ್ಷಣೆ ಮಾಡುತ್ತಾರೆ. ಇಂದಿನ ಆಧುನಿಕತೆಗೆ ಪೂರಕವಾಗಿ ಅನಾಹುತ ಸಂಭವಿಸಿದಾಗ ಜನರ ರಕ್ಷಣೆಗೆ ಹೊಸ ಹೊಸ ಆವಿಷ್ಕಾರಗಳನ್ನು ಮಾಡಿ ಅತ್ಯಾಧುನಿಕ ಯಂತ್ರಗಳು ಹಾಗೂ ಸೌಲಭ್ಯವನ್ನು ಇಲಾಖೆಗೆ ಒದಗಿಸುತ್ತಿದ್ದೇವೆ. ಹಾಗೆಯೇ ನೂತನ ಅಗ್ನಿಶಾಮಕ ವಾಹನ ಖರೀದಿಗೆ 50 ಕೋಟಿ ರೂ.ವನ್ನು ಮುಖ್ಯಮಂತ್ರಿಗಳು ಈಗಾಗಲೇ ಮಂಜೂರು ಮಾಡಿದ್ದಾರೆ. ಕೆಮಿಕಲ್ ಇಂಡಸ್ಟ್ರಿ, ಪೆಟ್ರೋಲ್ ಇಂಡಸ್ಟ್ರಿ ಈ ಭಾಗದಲ್ಲಿ ಇರುವುದರಿಂದ ಈ ಭಾಗಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…