ಪ್ರತೀ ತಾಲೂಕಿನಲ್ಲೂ ಅಗ್ನಿಶಾಮಕ ಠಾಣೆ ನಿರ್ಮಾಣದ ಯೋಜನೆಯಿದ್ದು, ಈಗಾಗಲೇ 200ಕ್ಕೂ ಹೆಚ್ಚು ಠಾಣೆಗಳು ರಾಜ್ಯದಲ್ಲಿ ಇದ್ದು ಇನ್ನು 30 -40 ಠಾಣೆಗಳನ್ನು ಹಂತ ಹಂತವಾಗಿದೆ ಮಂಜೂರು ಮಾಡಲಾಗಿದೆ. ಈ ಭಾಗದ ಜನರ ಬೇಡಿಕೆಯಂತೆ ಉಳ್ಳಾಲ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದ್ದು, ದ.ಕ ಜಿಲ್ಲೆಯ ಮೂಲ್ಕಿ ಹಾಗೂ ಕಡಬ ತಾಲೂಕಿನಲ್ಲೂ ಶೀಘ್ರದಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣವಾಗಲಿದೆ ಎಂದು ಕರ್ನಾಟಕ ರಾಜ್ಯದ ಗೃಹಸಚಿವ ಡಾ.ಪರಮೇಶ್ವರ್ ಹೇಳಿದ್ದಾರೆ.
ಅವರು ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಕಂಬಳಪದವು ಬಳಿ ನೂತನವಾಗಿ ನಿರ್ಮಾಣವಾಗಲಿರುವ ಅಗ್ನಿಶಾಮಕ ಠಾಣೆಗೆ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದ್ರು. ಅಗ್ನಿಶಾಮಕ ಮತ್ತು ತುರ್ತುಸೇವೆ ಇಲಾಖೆಯ ಸಿಬ್ಬಂದಿಗಳ ಸೇವೆ, ಪರಿಶ್ರಮ ಬಹಳ ಮುಖ್ಯವಾದದ್ದು. ಎಲ್ಲರನ್ನು ರಕ್ಷಣೆಗಾಗಿ ಅಗ್ನಿಶಾಮಕ ದಳ ತಮ್ಮ ಜೀವವನ್ನು ಅಡವಿಟ್ಟು ಬೇರೆಯವರ ರಕ್ಷಣೆ ಮಾಡುತ್ತಾರೆ. ಇಂದಿನ ಆಧುನಿಕತೆಗೆ ಪೂರಕವಾಗಿ ಅನಾಹುತ ಸಂಭವಿಸಿದಾಗ ಜನರ ರಕ್ಷಣೆಗೆ ಹೊಸ ಹೊಸ ಆವಿಷ್ಕಾರಗಳನ್ನು ಮಾಡಿ ಅತ್ಯಾಧುನಿಕ ಯಂತ್ರಗಳು ಹಾಗೂ ಸೌಲಭ್ಯವನ್ನು ಇಲಾಖೆಗೆ ಒದಗಿಸುತ್ತಿದ್ದೇವೆ. ಹಾಗೆಯೇ ನೂತನ ಅಗ್ನಿಶಾಮಕ ವಾಹನ ಖರೀದಿಗೆ 50 ಕೋಟಿ ರೂ.ವನ್ನು ಮುಖ್ಯಮಂತ್ರಿಗಳು ಈಗಾಗಲೇ ಮಂಜೂರು ಮಾಡಿದ್ದಾರೆ. ಕೆಮಿಕಲ್ ಇಂಡಸ್ಟ್ರಿ, ಪೆಟ್ರೋಲ್ ಇಂಡಸ್ಟ್ರಿ ಈ ಭಾಗದಲ್ಲಿ ಇರುವುದರಿಂದ ಈ ಭಾಗಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…