ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿ ಜಿಲ್ಲೆಯ ಮಣಿಪಾಲದಲ್ಲಿರುವ ಅನ್ನಪೂರ್ಣ ಕ್ಯಾಂಟೀನ್‌ಗೆ 50ರ ಸಂಭ್ರಮ

ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ 1975ರ ಜುಲೈ 10ರಂದು ಅನ್ನಪೂರ್ಣ ಕ್ಯಾಂಟೀನ್ ಆರಂಭವಾಗಿತ್ತು. ಅದಕ್ಕೀಗ 50 ವರ್ಷ ಪೂರ್ಣಗೊಂಡಿದೆ. ಹೋಟೆಲ್ ಉದ್ಯಮ ಮತ್ತು ಸಾರ್ವಜನಿಕ ಒಡನಾಟ ಆರಂಭಿಸಿ, 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹೋಟೆಲ್‌ನ ಗ್ರಾಹಕರಿಗೆ, ಸಾರ್ವಜನಿಕರಿಗೆ ಉಚಿತವಾಗಿ ತಿಂಡಿ, ಊಟ ವಿತರಿಸಲಾಯಿತು.

ಮಣಿಪಾಲ ಪೈ ಕುಟುಂಬ ಮತ್ತು ಉದ್ಯಾವರ ರಾಘವೇಂದ್ರ ಕಿಣಿ ಸಹಕಾರದಲ್ಲಿ ಆರಂಭವಾದ ಕ್ಯಾಂಟೀನನ್ನು, ನಾರಾಯಣ ಪ್ರಭು, ಮಾಧವ ಪ್ರಭು, ವಸಂತ ಪ್ರಭು, ದೇವೇಂದ್ರ ಪ್ರಭು ಎಂಬ ಸಹೋದರರು ನಡೆಸಿಕೊಂಡು ಬಂದಿದ್ದಾರೆ. 5 ಪೈಸೆ, 10 ಪೈಸೆ ಕಾಲದಲ್ಲಿ ಮಣಿಪಾಲ ಕೆಎಂಸಿಗೆ ಬರುವ ರೋಗಿಗಳು, ವಿದ್ಯಾರ್ಥಿಗಳ ಹೊಟ್ಟೆ ತಣಿಸುತ್ತಿತ್ತು. ಇಂದಿಗೂ ಇತರೆ ಹೊಟೆಲ್ ಗಳಿಗೆ ಹೋಲಿಸಿದರೆ ತಿಂಡಿ , ಊಟದ ರೇಟ್ ಬಹಳ ಕಮ್ಮಿಯಿದೆ. ಕ್ಯಾಂಟಿನ್‌ಗೆ 50 ವರ್ಷ ತುಂಬಿದ ಹಿನ್ನಲೆ ಬೆಳಗ್ಗೆ ಮಧ್ಯಾಹ್ನ ಸಂಜೆ ಸುಮಾರು ನಾಲ್ಕು ಸಾವಿರ ಜನ ಗ್ರಾಹಕರು, ಸಾರ್ವಜನಿಕರು, ಆಪ್ತರಿಗೆ ಉಚಿತ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ ಇಡ್ಲಿ ಸಾಂಬಾರ್, ಉಪ್ಪಿಟ್ಟು, ಕೇಸರಿಬಾತ್, ಪೋಡಿ, ವಡೆ ಚಹಾ ಕಾಫಿ ವಿತರಿಸಲಾಯಿತು. ಮಧ್ಯಾಹ್ನ ಉಪ್ಪಿನಕಾಯಿ, ಎರಡು ಪಲ್ಯ, ಗಸಿ,ಅನ್ನ ಸಾರು, ಪಾಯಸ ಮಜ್ಜಿಗೆಯನ್ನು ಸಾವಿರಕ್ಕೂ ಮಿಕ್ಕಿ ಜನಕ್ಕೆ ವಿತರಣೆ ಮಾಡಲಾಯ್ತು. ಸಂಜೆ ತಿಂಡಿ ವ್ಯವಸ್ಥೆ ಮಾಡಲಾಗಿದ್ದು, 50 ವರ್ಷದಿಂದ ಹೋಟೆಲ್ ನಲ್ಲಿ ಕೆಲಸ ಮಾಡಿದ ಸಿಬ್ಬಂದಿಗೆ ಸನ್ಮಾನ ಕೂಡ ನಡೆದಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!