ಗುರುಪೂರ್ಣಿಮೆಯ ಪ್ರಯುಕ್ತ ನಾಗೂರು ಶ್ರೀ ಲಲಿತ ಕೃಷ್ಣ ಸಭಾಭವನದಲ್ಲಿ ಗುರುಪೂರ್ಣಿಮಾ ಸಂಭ್ರಮ 2025 ನಡೆಯಿತು.
ಯೋಗ ಶಿಕ್ಷಕರಾದ ಆಚಾರ್ಯ ಶ್ರೀ ಕೇಶವಜೀ ಕಾರ್ಯಕ್ರಮದ ನೇತೃತ್ವ ವಹಿಸಿದ್ರು. ಭಜನಾ ಕಾರ್ಯಕ್ರಮ, ಗುರುಪ್ರಾರ್ಥನೆ, ಸತ್ಸಂಗದ ನಂತರ ಅಕಾಲಿಕ ಮರಣ ಹೊಂದಿದ ನಿಸ್ವಾರ್ಥ ಮತ್ತು ಸೇವಾ ಮನೋಭಾವದ ಕ್ರಿಯಾಶೀಲಾ ಸ್ವಯಂ ಸೇವಕರಾದ ಗೀತಾ ಆಚಾರ್ಯ ನಾಯ್ಕನಕಟ್ಟೆ ಇವರ ಆತ್ಮ ಸದ್ಗತಿಗಾಗಿ ಮೌನ ಪ್ರಾರ್ಥನೆ ಅರ್ಪಿಸಲಾಯಿತು. ಗುರುಪೂರ್ಣಿಮೆ ವಿಶೇಷದ ಬಗ್ಗೆ ಆಚಾರ್ಯರು ಉಪನ್ಯಾಸ ನೀಡಿದ್ದಾರೆ. ನಂತರ ಗುರುಪೂಜೆ, ಶ್ರೀ ದತ್ತಾತ್ರೇಯ ಗುರುಗಳ ಬೆಳ್ಳಿ ಪಾದುಕೆಗೆ ಪಂಚಾಮೃತ ಅಭಿಷೇಕ ಸಹಿತ ಶೋಡಷೋಪಚಾರ ಮುಂತಾದ ಧಾರ್ಮಿಕ ವಿಧಿ ವಿಧಾನಗಳು ನಡೆದಿವೆ.
ಕೊನೆಯಲ್ಲಿ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಿತು. ಪೂಜೆ ಮತ್ತು ಪ್ರಸಾದ ವೆಚ್ಚಗಳನ್ನು ಪಾಂಡುರಂಗ ಅಂಗಡಿಮನೆ ಗಿರಿಜಾ ನಾರಾಯಣ ತಾರಪತಿ ಭರಿಸಿದ್ದಾರೆ. ಮಾಲೀಕರಾದ ರತ್ನಾಕರ ಉಡುಪರು ಕಾರ್ಯಕ್ರಮ ನಡೆಸಲು ಉಚಿತವಾಗಿ ಸಭಾಂಗಣ ನೀಡಿದ್ದು, 200ಕ್ಕೂ ಅಧಿಕ ಮಂದಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…