ಗುರುಪೂರ್ಣಿಮೆಯ ಪ್ರಯುಕ್ತ ನಾಗೂರು ಶ್ರೀ ಲಲಿತ ಕೃಷ್ಣ ಸಭಾಭವನದಲ್ಲಿ ಗುರುಪೂರ್ಣಿಮಾ ಸಂಭ್ರಮ 2025 ನಡೆಯಿತು.
ಯೋಗ ಶಿಕ್ಷಕರಾದ ಆಚಾರ್ಯ ಶ್ರೀ ಕೇಶವಜೀ ಕಾರ್ಯಕ್ರಮದ ನೇತೃತ್ವ ವಹಿಸಿದ್ರು. ಭಜನಾ ಕಾರ್ಯಕ್ರಮ, ಗುರುಪ್ರಾರ್ಥನೆ, ಸತ್ಸಂಗದ ನಂತರ ಅಕಾಲಿಕ ಮರಣ ಹೊಂದಿದ ನಿಸ್ವಾರ್ಥ ಮತ್ತು ಸೇವಾ ಮನೋಭಾವದ ಕ್ರಿಯಾಶೀಲಾ ಸ್ವಯಂ ಸೇವಕರಾದ ಗೀತಾ ಆಚಾರ್ಯ ನಾಯ್ಕನಕಟ್ಟೆ ಇವರ ಆತ್ಮ ಸದ್ಗತಿಗಾಗಿ ಮೌನ ಪ್ರಾರ್ಥನೆ ಅರ್ಪಿಸಲಾಯಿತು. ಗುರುಪೂರ್ಣಿಮೆ ವಿಶೇಷದ ಬಗ್ಗೆ ಆಚಾರ್ಯರು ಉಪನ್ಯಾಸ ನೀಡಿದ್ದಾರೆ. ನಂತರ ಗುರುಪೂಜೆ, ಶ್ರೀ ದತ್ತಾತ್ರೇಯ ಗುರುಗಳ ಬೆಳ್ಳಿ ಪಾದುಕೆಗೆ ಪಂಚಾಮೃತ ಅಭಿಷೇಕ ಸಹಿತ ಶೋಡಷೋಪಚಾರ ಮುಂತಾದ ಧಾರ್ಮಿಕ ವಿಧಿ ವಿಧಾನಗಳು ನಡೆದಿವೆ.
ಕೊನೆಯಲ್ಲಿ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಿತು. ಪೂಜೆ ಮತ್ತು ಪ್ರಸಾದ ವೆಚ್ಚಗಳನ್ನು ಪಾಂಡುರಂಗ ಅಂಗಡಿಮನೆ ಗಿರಿಜಾ ನಾರಾಯಣ ತಾರಪತಿ ಭರಿಸಿದ್ದಾರೆ. ಮಾಲೀಕರಾದ ರತ್ನಾಕರ ಉಡುಪರು ಕಾರ್ಯಕ್ರಮ ನಡೆಸಲು ಉಚಿತವಾಗಿ ಸಭಾಂಗಣ ನೀಡಿದ್ದು, 200ಕ್ಕೂ ಅಧಿಕ ಮಂದಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…