ಉಳ್ಳಾಲ: ಬಸ್ಸು ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮುಡಿಪು ಜಂಕ್ಷನ್ನಲ್ಲಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಿಂದ ಕಾರು ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಮಂಗಳೂರಿನಿಂದ ಬಿ.ಸಿ.ರೋಡ್ ಕಡೆಗೆ ಹೋಗುತ್ತಿದ್ದ ಎನ್.ಎಸ್.ಟ್ರಾವೆಲ್ಸ್ ಬಸ್ ಮುಡಿಪು ಜಂಕ್ಷನ್ ನಲ್ಲಿ ತಿರುಗುತ್ತಿದ್ದಾಗ ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಜೆನ್ ಕಾರಿಗೆ ಡಿಕ್ಕಿ ಹೊಡೆದಿದೆ.
ಬಸ್ಸಿನ ಮುಂಭಾಗಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



