ಕಂಬಳಪದವು ಬಳಿ ನೂತನವಾಗಿ ನಿರ್ಮಾಣಗೊಂಡಿರುವ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರದ ಉದ್ಘಾಟನ ಸಮಾರಂಭ ನಡೆಯಿತು. ರಾಜ್ಯ ಸಾರಿಗೆ ಮತ್ತು ಮುಜುರಾಯಿ ಸಚಿವ ರಾಮಲಿಂಗ ರೆಡ್ಡಿ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದ್ರು.
ಬಳಿಕ ಮಾತನಾಡಿದ ಇವರು, ಈ ಭಾಗದ ಜನರ ಬೇಡಿಕೆಯಂತೆ ಸುಮಾರು ಏಳುಕೋಟಿ ರೂ ವೆಚ್ಚದಲ್ಲಿ ಈ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರವನ್ನು ನಿರ್ಮಿಸಲಾಗಿದೆ. ಈಗಾಗಲೇ ದಾರಾವಾಡ, ಕೊಪ್ಪಳ, ದಾಂಡೇಲಿ ಸೇರಿದಂತೆ ಆರು ಕಡೆ ಕಾಮಗಾರಿ ಪೂರ್ಣಗೊಂಡಿದೆ. ಅಲ್ಲದೆ ಬೆಳಗಾವಿ, ರಾಯಚೂರು, ದೇವನಹಳ್ಳಿ, ಕೋಲಾರ, ಹೊಸಪೇಟೆ, ಬಳ್ಳಾರಿ, ವಿಜಯಪುರ, ಇತ್ಯಾದಿ ಜಿಲ್ಲೆಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸ್ವಯಂ ಚಾಲಿತ ವಾಹನ ಪರೀಕ್ಷಾ ಕೇಂದ್ರಗಳ ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿದೆ.
ಕರ್ನಾಟಕ ದೇಶದ ಅತೀ ಹೆಚ್ಚು ಟ್ರ್ಯಾಕ್ ಹೊಂದಿದ ರಾಜ್ಯವಾಗಿ ಗುರುತಿಸಿದೆ ಎಂದ್ರು. ದ.ಕ.ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ, ವಿದ್ಯುನ್ಮಾನ ಟ್ರ್ಯಾಕ್ ಉದ್ಘಾಟನೆ ಮೂಲಕ ಬಹಳ ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಸರ್ಕಾರಿ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಯ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕಿದೆ. ಕೇಂದ್ರ ಸರ್ಕಾರದ ಮಹತ್ಚದ ಎಲೆಕ್ಟ್ರಾನಿಕ್ ಬಸ್ ಗಳು ಶೀಘ್ರದಲ್ಲೇ ದ.ಕ.ಜಿಲ್ಲೆಗೆ ಬರಲಿವೆ ಎಂದ್ರು. ಇದೇ ವೇಳೆ ಕಾರ್ಯಕ್ರಮದಲ್ಲಿ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಮಾತಾನಾಡಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…