ಕಂಬಳಪದವು ಬಳಿ ನೂತನವಾಗಿ ನಿರ್ಮಾಣಗೊಂಡಿರುವ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರದ ಉದ್ಘಾಟನ ಸಮಾರಂಭ ನಡೆಯಿತು. ರಾಜ್ಯ ಸಾರಿಗೆ ಮತ್ತು ಮುಜುರಾಯಿ ಸಚಿವ ರಾಮಲಿಂಗ ರೆಡ್ಡಿ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದ್ರು.
ಬಳಿಕ ಮಾತನಾಡಿದ ಇವರು, ಈ ಭಾಗದ ಜನರ ಬೇಡಿಕೆಯಂತೆ ಸುಮಾರು ಏಳುಕೋಟಿ ರೂ ವೆಚ್ಚದಲ್ಲಿ ಈ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರವನ್ನು ನಿರ್ಮಿಸಲಾಗಿದೆ. ಈಗಾಗಲೇ ದಾರಾವಾಡ, ಕೊಪ್ಪಳ, ದಾಂಡೇಲಿ ಸೇರಿದಂತೆ ಆರು ಕಡೆ ಕಾಮಗಾರಿ ಪೂರ್ಣಗೊಂಡಿದೆ. ಅಲ್ಲದೆ ಬೆಳಗಾವಿ, ರಾಯಚೂರು, ದೇವನಹಳ್ಳಿ, ಕೋಲಾರ, ಹೊಸಪೇಟೆ, ಬಳ್ಳಾರಿ, ವಿಜಯಪುರ, ಇತ್ಯಾದಿ ಜಿಲ್ಲೆಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸ್ವಯಂ ಚಾಲಿತ ವಾಹನ ಪರೀಕ್ಷಾ ಕೇಂದ್ರಗಳ ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿದೆ.
ಕರ್ನಾಟಕ ದೇಶದ ಅತೀ ಹೆಚ್ಚು ಟ್ರ್ಯಾಕ್ ಹೊಂದಿದ ರಾಜ್ಯವಾಗಿ ಗುರುತಿಸಿದೆ ಎಂದ್ರು. ದ.ಕ.ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ, ವಿದ್ಯುನ್ಮಾನ ಟ್ರ್ಯಾಕ್ ಉದ್ಘಾಟನೆ ಮೂಲಕ ಬಹಳ ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಸರ್ಕಾರಿ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಯ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕಿದೆ. ಕೇಂದ್ರ ಸರ್ಕಾರದ ಮಹತ್ಚದ ಎಲೆಕ್ಟ್ರಾನಿಕ್ ಬಸ್ ಗಳು ಶೀಘ್ರದಲ್ಲೇ ದ.ಕ.ಜಿಲ್ಲೆಗೆ ಬರಲಿವೆ ಎಂದ್ರು. ಇದೇ ವೇಳೆ ಕಾರ್ಯಕ್ರಮದಲ್ಲಿ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಮಾತಾನಾಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…