ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರಿನ ಹೆಸರಾಂತ ಸಂಸ್ಥೆ ರೋಹನ್ ಕಾರ್ಪೋರೇಷನ್‌ಗೆ ಬಾಲಿವುಡ್ ಸ್ಟಾರ್ ಶಾರುಖ್‌ಖಾನ್ ಬ್ರಾಂಡ್ ಅಂಬಾಸಿಡರ್

ಮಂಗಳೂರಿನ ಹೆಸರಾಂತ ನಿರ್ಮಾಣ ಸಂಸ್ಥೆ ರೋಹನ್ ಕಾರ್ಪೋರೇಷನ್‌ಗೆ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ನೇಮಕಗೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ಅವರು ತಮ್ಮ ಸಂಸ್ಥೆಗೆ ಬ್ರಾಂಡ್ ಅಂಬಾಸಿಡರ್ ಆಗಿ ಕಾರ್ಯನಿರ್ವಹಿಸುವರು ಎಂದು ಘೋಷಿಸಿದ ರೋಹನ್ ಕಾರ್ಪೋರೇಷನ್ ಮುಖ್ಯಸ್ಥ ಡಾ. ರೋಹನ್ ಮೊಂತೆರೋ ಕರ್ನಾಟಕದಲ್ಲಿ ಶಾರುಖ್ ಖಾನ್ ಅವರು ಬ್ರಾಂಡ್ ಅಂಬಾಸಿಡರ್ ಆಗಿರುವುದು ಇದೇ ಪ್ರಥಮ ಎಂದ್ರು.

ಇದರಿಂದಾಗಿ ನಮ್ಮ ಸಂಸ್ಥೆಯ ಮೂವತ್ತೆರಡು ವರ್ಷದ ಪಯಣಕ್ಕೆ ಇನ್ನಷ್ಟು ಉತ್ತೇಜನ ಬಂದಿದೆ. ಗುಣಮಟ್ಟ, ಶ್ರೇಷ್ಠತ್ವದ ಜೊತೆ ಗ್ಲಾಮರ್ ಕೈಜೋಡಿಸಿದಂತಾಗಿದೆ ಎಂದಿದ್ದಾರೆ. ಸಮಾರಂಭದಲ್ಲಿ ರೋಹನ್ ಕಾರ್ಪೋರೇಷನ್ ಸಂಸ್ಥೆಯ ಬೆಳವಣಿಗೆಯ ಪ್ರಯಾಣ ಮತ್ತು ಶಾರುಖ್ ಖಾನ್ ಅವರ ವ್ಯಕ್ತಿತ್ವವನ್ನು ಅನಾವರಣಗೊಳಿಸುವ ವೀಡಿಯೋವನ್ನು ಪ್ರದರ್ಶಿಸಲಾಯಿತು. ರೋಹನ್ ಕಾರ್ಪೋರೇಷನ್ ಸಂಸ್ಥೆ ಮಂಗಳೂರನ್ನು ಕೇಂದ್ರವಾಗಿರಿಸಿಕೊಂಡು ಜಾಗತಿಕ ಗುಣಮಟ್ಟದ ವಸತಿ ಹಾಗು ವಾಣಿಜ್ಯ ಸಮುಚ್ಚಯಗಳನ್ನು ನಿರ್ಮಿಸುತ್ತಿದೆ. ಇದುವರೆಗೆ ಐದು ಸಾವಿರಕ್ಕೂ ಅಧಿಕ ಸಂತೃಪ್ತ ಗ್ರಾಹಕ ಬಳಗಕ್ಕೆ ನೆಮ್ಮದಿಯ ವಸತಿಯನ್ನು ಒದಗಿಸಿಕೊಟ್ಟಿದೆ. ಮೂರು ದಶಕಗಳಲ್ಲಿ ಮಂಗಳೂರಿನಲ್ಲಿ ತನ್ನದೇ ವಿಶಿಷ್ಟ ಹೆಜ್ಜೆ ಗುರುತುಗಳನ್ನು ಮೂಡಿಸಿದೆ. ವಿಶ್ವಾಸದ ಪ್ರತೀಕವಾಗಿ ಅದರ ನಿರ್ಮಾಣಗಳು ಮಂಗಳೂರಿನ ಹೆಮ್ಮೆಯ ಹೆಗ್ಗುರುತುಗಳಾಗಿ ಕಂಗೊಳಿಸುತ್ತಿವೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!