ಮಂಗಳೂರಿನ ಹೆಸರಾಂತ ನಿರ್ಮಾಣ ಸಂಸ್ಥೆ ರೋಹನ್ ಕಾರ್ಪೋರೇಷನ್ಗೆ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ನೇಮಕಗೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ಅವರು ತಮ್ಮ ಸಂಸ್ಥೆಗೆ ಬ್ರಾಂಡ್ ಅಂಬಾಸಿಡರ್ ಆಗಿ ಕಾರ್ಯನಿರ್ವಹಿಸುವರು ಎಂದು ಘೋಷಿಸಿದ ರೋಹನ್ ಕಾರ್ಪೋರೇಷನ್ ಮುಖ್ಯಸ್ಥ ಡಾ. ರೋಹನ್ ಮೊಂತೆರೋ ಕರ್ನಾಟಕದಲ್ಲಿ ಶಾರುಖ್ ಖಾನ್ ಅವರು ಬ್ರಾಂಡ್ ಅಂಬಾಸಿಡರ್ ಆಗಿರುವುದು ಇದೇ ಪ್ರಥಮ ಎಂದ್ರು.
ಇದರಿಂದಾಗಿ ನಮ್ಮ ಸಂಸ್ಥೆಯ ಮೂವತ್ತೆರಡು ವರ್ಷದ ಪಯಣಕ್ಕೆ ಇನ್ನಷ್ಟು ಉತ್ತೇಜನ ಬಂದಿದೆ. ಗುಣಮಟ್ಟ, ಶ್ರೇಷ್ಠತ್ವದ ಜೊತೆ ಗ್ಲಾಮರ್ ಕೈಜೋಡಿಸಿದಂತಾಗಿದೆ ಎಂದಿದ್ದಾರೆ. ಸಮಾರಂಭದಲ್ಲಿ ರೋಹನ್ ಕಾರ್ಪೋರೇಷನ್ ಸಂಸ್ಥೆಯ ಬೆಳವಣಿಗೆಯ ಪ್ರಯಾಣ ಮತ್ತು ಶಾರುಖ್ ಖಾನ್ ಅವರ ವ್ಯಕ್ತಿತ್ವವನ್ನು ಅನಾವರಣಗೊಳಿಸುವ ವೀಡಿಯೋವನ್ನು ಪ್ರದರ್ಶಿಸಲಾಯಿತು. ರೋಹನ್ ಕಾರ್ಪೋರೇಷನ್ ಸಂಸ್ಥೆ ಮಂಗಳೂರನ್ನು ಕೇಂದ್ರವಾಗಿರಿಸಿಕೊಂಡು ಜಾಗತಿಕ ಗುಣಮಟ್ಟದ ವಸತಿ ಹಾಗು ವಾಣಿಜ್ಯ ಸಮುಚ್ಚಯಗಳನ್ನು ನಿರ್ಮಿಸುತ್ತಿದೆ. ಇದುವರೆಗೆ ಐದು ಸಾವಿರಕ್ಕೂ ಅಧಿಕ ಸಂತೃಪ್ತ ಗ್ರಾಹಕ ಬಳಗಕ್ಕೆ ನೆಮ್ಮದಿಯ ವಸತಿಯನ್ನು ಒದಗಿಸಿಕೊಟ್ಟಿದೆ. ಮೂರು ದಶಕಗಳಲ್ಲಿ ಮಂಗಳೂರಿನಲ್ಲಿ ತನ್ನದೇ ವಿಶಿಷ್ಟ ಹೆಜ್ಜೆ ಗುರುತುಗಳನ್ನು ಮೂಡಿಸಿದೆ. ವಿಶ್ವಾಸದ ಪ್ರತೀಕವಾಗಿ ಅದರ ನಿರ್ಮಾಣಗಳು ಮಂಗಳೂರಿನ ಹೆಮ್ಮೆಯ ಹೆಗ್ಗುರುತುಗಳಾಗಿ ಕಂಗೊಳಿಸುತ್ತಿವೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…