ಮಂಗಳೂರಿನ ಹೆಸರಾಂತ ನಿರ್ಮಾಣ ಸಂಸ್ಥೆ ರೋಹನ್ ಕಾರ್ಪೋರೇಷನ್ಗೆ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ನೇಮಕಗೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ಅವರು ತಮ್ಮ ಸಂಸ್ಥೆಗೆ ಬ್ರಾಂಡ್ ಅಂಬಾಸಿಡರ್ ಆಗಿ ಕಾರ್ಯನಿರ್ವಹಿಸುವರು ಎಂದು ಘೋಷಿಸಿದ ರೋಹನ್ ಕಾರ್ಪೋರೇಷನ್ ಮುಖ್ಯಸ್ಥ ಡಾ. ರೋಹನ್ ಮೊಂತೆರೋ ಕರ್ನಾಟಕದಲ್ಲಿ ಶಾರುಖ್ ಖಾನ್ ಅವರು ಬ್ರಾಂಡ್ ಅಂಬಾಸಿಡರ್ ಆಗಿರುವುದು ಇದೇ ಪ್ರಥಮ ಎಂದ್ರು.
ಇದರಿಂದಾಗಿ ನಮ್ಮ ಸಂಸ್ಥೆಯ ಮೂವತ್ತೆರಡು ವರ್ಷದ ಪಯಣಕ್ಕೆ ಇನ್ನಷ್ಟು ಉತ್ತೇಜನ ಬಂದಿದೆ. ಗುಣಮಟ್ಟ, ಶ್ರೇಷ್ಠತ್ವದ ಜೊತೆ ಗ್ಲಾಮರ್ ಕೈಜೋಡಿಸಿದಂತಾಗಿದೆ ಎಂದಿದ್ದಾರೆ. ಸಮಾರಂಭದಲ್ಲಿ ರೋಹನ್ ಕಾರ್ಪೋರೇಷನ್ ಸಂಸ್ಥೆಯ ಬೆಳವಣಿಗೆಯ ಪ್ರಯಾಣ ಮತ್ತು ಶಾರುಖ್ ಖಾನ್ ಅವರ ವ್ಯಕ್ತಿತ್ವವನ್ನು ಅನಾವರಣಗೊಳಿಸುವ ವೀಡಿಯೋವನ್ನು ಪ್ರದರ್ಶಿಸಲಾಯಿತು. ರೋಹನ್ ಕಾರ್ಪೋರೇಷನ್ ಸಂಸ್ಥೆ ಮಂಗಳೂರನ್ನು ಕೇಂದ್ರವಾಗಿರಿಸಿಕೊಂಡು ಜಾಗತಿಕ ಗುಣಮಟ್ಟದ ವಸತಿ ಹಾಗು ವಾಣಿಜ್ಯ ಸಮುಚ್ಚಯಗಳನ್ನು ನಿರ್ಮಿಸುತ್ತಿದೆ. ಇದುವರೆಗೆ ಐದು ಸಾವಿರಕ್ಕೂ ಅಧಿಕ ಸಂತೃಪ್ತ ಗ್ರಾಹಕ ಬಳಗಕ್ಕೆ ನೆಮ್ಮದಿಯ ವಸತಿಯನ್ನು ಒದಗಿಸಿಕೊಟ್ಟಿದೆ. ಮೂರು ದಶಕಗಳಲ್ಲಿ ಮಂಗಳೂರಿನಲ್ಲಿ ತನ್ನದೇ ವಿಶಿಷ್ಟ ಹೆಜ್ಜೆ ಗುರುತುಗಳನ್ನು ಮೂಡಿಸಿದೆ. ವಿಶ್ವಾಸದ ಪ್ರತೀಕವಾಗಿ ಅದರ ನಿರ್ಮಾಣಗಳು ಮಂಗಳೂರಿನ ಹೆಮ್ಮೆಯ ಹೆಗ್ಗುರುತುಗಳಾಗಿ ಕಂಗೊಳಿಸುತ್ತಿವೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…