ಮಂಗಳೂರಿನ ಹೆಸರಾಂತ ನಿರ್ಮಾಣ ಸಂಸ್ಥೆ ರೋಹನ್ ಕಾರ್ಪೋರೇಷನ್ಗೆ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ನೇಮಕಗೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ಅವರು ತಮ್ಮ ಸಂಸ್ಥೆಗೆ ಬ್ರಾಂಡ್ ಅಂಬಾಸಿಡರ್ ಆಗಿ ಕಾರ್ಯನಿರ್ವಹಿಸುವರು ಎಂದು ಘೋಷಿಸಿದ ರೋಹನ್ ಕಾರ್ಪೋರೇಷನ್ ಮುಖ್ಯಸ್ಥ ಡಾ. ರೋಹನ್ ಮೊಂತೆರೋ ಕರ್ನಾಟಕದಲ್ಲಿ ಶಾರುಖ್ ಖಾನ್ ಅವರು ಬ್ರಾಂಡ್ ಅಂಬಾಸಿಡರ್ ಆಗಿರುವುದು ಇದೇ ಪ್ರಥಮ ಎಂದ್ರು.
ಇದರಿಂದಾಗಿ ನಮ್ಮ ಸಂಸ್ಥೆಯ ಮೂವತ್ತೆರಡು ವರ್ಷದ ಪಯಣಕ್ಕೆ ಇನ್ನಷ್ಟು ಉತ್ತೇಜನ ಬಂದಿದೆ. ಗುಣಮಟ್ಟ, ಶ್ರೇಷ್ಠತ್ವದ ಜೊತೆ ಗ್ಲಾಮರ್ ಕೈಜೋಡಿಸಿದಂತಾಗಿದೆ ಎಂದಿದ್ದಾರೆ. ಸಮಾರಂಭದಲ್ಲಿ ರೋಹನ್ ಕಾರ್ಪೋರೇಷನ್ ಸಂಸ್ಥೆಯ ಬೆಳವಣಿಗೆಯ ಪ್ರಯಾಣ ಮತ್ತು ಶಾರುಖ್ ಖಾನ್ ಅವರ ವ್ಯಕ್ತಿತ್ವವನ್ನು ಅನಾವರಣಗೊಳಿಸುವ ವೀಡಿಯೋವನ್ನು ಪ್ರದರ್ಶಿಸಲಾಯಿತು. ರೋಹನ್ ಕಾರ್ಪೋರೇಷನ್ ಸಂಸ್ಥೆ ಮಂಗಳೂರನ್ನು ಕೇಂದ್ರವಾಗಿರಿಸಿಕೊಂಡು ಜಾಗತಿಕ ಗುಣಮಟ್ಟದ ವಸತಿ ಹಾಗು ವಾಣಿಜ್ಯ ಸಮುಚ್ಚಯಗಳನ್ನು ನಿರ್ಮಿಸುತ್ತಿದೆ. ಇದುವರೆಗೆ ಐದು ಸಾವಿರಕ್ಕೂ ಅಧಿಕ ಸಂತೃಪ್ತ ಗ್ರಾಹಕ ಬಳಗಕ್ಕೆ ನೆಮ್ಮದಿಯ ವಸತಿಯನ್ನು ಒದಗಿಸಿಕೊಟ್ಟಿದೆ. ಮೂರು ದಶಕಗಳಲ್ಲಿ ಮಂಗಳೂರಿನಲ್ಲಿ ತನ್ನದೇ ವಿಶಿಷ್ಟ ಹೆಜ್ಜೆ ಗುರುತುಗಳನ್ನು ಮೂಡಿಸಿದೆ. ವಿಶ್ವಾಸದ ಪ್ರತೀಕವಾಗಿ ಅದರ ನಿರ್ಮಾಣಗಳು ಮಂಗಳೂರಿನ ಹೆಮ್ಮೆಯ ಹೆಗ್ಗುರುತುಗಳಾಗಿ ಕಂಗೊಳಿಸುತ್ತಿವೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…