ಸಾಲೆತ್ತೂರು ಶಿವಗಿರಿ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಚಾಲನೆ ನೀಡಿದ್ದಾರೆ. ಬಳಿಕ ಆಶೀವರ್ಚನ ನೀಡಿ, ನಮ್ಮ ಅಂತರಂಗದಲ್ಲಿ ದೇವರು ಇರುವುದನ್ನು ಅರಿತುಕೊಂಡರೆ ಎಲ್ಲ ಕಾರ್ಯಗಳನ್ನು ಯಶಸ್ವಿಯಾಗಿಸಲು ಸಾಧ್ಯ. ದೇಗುಲದ ಜೀಣೋದ್ಧಾರಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು. ಗ್ರಾಮದ ದೇವಳದ ಜೀಣೋದ್ಧಾರ ಕಾರ್ಯ ಭಕ್ತರಿಗೆ ಲಭಿಸಿದ ಪುಣ್ಯವಕಾಶ.
ದೇವಸ್ಥಾನ ಜೀಣೋದ್ಧಾರ ಪ್ರಕ್ರಿಯೆಗೆ ದ್ವಾರ ಶಿಲಾನ್ಯಾಸ ನಡೆಸಿದ್ದು ಕೂಡಾ ಶುಭ ಸೂಚನೆಯೇ ಆಗಿದೆ ಎಂದಿದ್ದಾರೆ. ಪ್ರಧಾನ ಅರ್ಚಕರಾದ ಭಾರ್ಗವ ಉಡುಪರ ನೇತೃತ್ವದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದಿದೆ. ಇನ್ನು ಸಂದರ್ಭದಲ್ಲಿ ಕ್ಷೇತ್ರ ತಂತ್ರಸ್ಥಾನದ ಮುಖ್ಯಸ್ಥರಾದ ಶ್ರೀನಿವಾಸ ಆಚಾರ್ ಮಂಕುಡೆ, ಮಂಗಳೂರು ಮನಪಾದ ವಲಯ ಆಯುಕ್ತರಾದ ರೇಖಾ ಜೆ ಶೆಟ್ಟಿ, ಶೀನಪ್ಪ ಆಳ್ವ ಕೊಲ್ಲಾಡಿ, ಚಿತ್ತರಂಜನ್ ಕರೈ, ಕೃಷಿಕರಾದ ಗೋಪಣ್ಣ ರೈ ಅಗರಿ, ಶ್ರೀಧರ ಪೂಜಾರಿ ಮಾವೆ, ಸದಾಶಿವ ಸೇವಾ ಟ್ರಸ್ಟ್ ಅಧ್ಯಕ್ಷರಾದ ಎಸ್ ರವಿ ಕುಮಾರ್ ಬಳ್ಳಕ್ಕುರಾಯ, ಕೋಶಾಧಿಕಾರಿ ಮಂಜುನಾಥ ರೈ ಅಗರಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಗಿರೀಶ್ ಭಂಡಾರಿ ಕುಳಾಲು ಸೇರಿದಂತೆ ಅನೇಕರು ಉಪಸ್ಥಿತರಿದ್ರು. ಈ ಪುಣ್ಯಕಾರ್ಯಕ್ರಮದಲ್ಲಿ ಗ್ರಾಮಸ್ಥರು ಸೇರಿದಂತೆ ಊರ ಪರವೂರ ಭಕ್ತಾದಿಗಳು ಭಾಗಿಯಾಗಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…