ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶೀರೂರು ಪರ್ಯಾಯ; ಕಟ್ಟಿಗೆ ಮುಹೂರ್ತ ಸಂಪನ್ನ

ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯ ಮಹೋತ್ಸವದಲ್ಲಿ ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯದ ಪೂರ್ವಭಾವಿಯಾಗಿ “ಕಟ್ಟಿಗೆ ಮುಹೂರ್ತವು” ಶ್ರೀಕೃಷ್ಣ ಮಠದ ಪರಿಸರದಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರೊಂದಿಗೆ ಪ್ರಸ್ತುತ ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗು ಕಿರಿಯ ಯತಿ ಸುಶೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿದ್ರು. ಶ್ರೀರೂರು ಮಠದ ದಿವಾನರಾದ ಡಾ.ಉದಯಕುಮಾರ ಸರಳತ್ತಾಯರ ನೇತೃತ್ವದಲ್ಲಿ ಪುರೋಹಿತರಾದ ಗಿರಿರಾಜ ಉಪಾಧ್ಯಾಯರು ಶ್ರೀರೂರು ಮಠದ ಶ್ರೀವಿಠ್ಠಲ ದೇವರು, ಶ್ರೀಚಂದ್ರೇಶ್ವರ ದೇವರು, ಶ್ರೀಅನಂತೇಶ್ವರ, ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿತು. ನಂತರ ಮಠದ ಕಲ್ಸಂಕ ಲಕ್ಷ್ಮೀ ತೋಟದಿಂದ ಕಟ್ಟಿಗೆಯನ್ನು ಎತ್ತಿನಗಾಡಿ ಹಾಗೂ ಕೈಗಾಡಿಯಲ್ಲಿ ಮತ್ತು ಭಕ್ತರು ಕೈಯಲ್ಲಿ ಹಿಡಿದುಕೊಂಡು ಮೆರವಣಿಗೆಯಲ್ಲಿ ತರಲಾಯಿತು. ಈ ಕಾರ್ಯಕ್ರಮದಲ್ಲಿ ಶಾಸಕರು ಸೇರಿದಂತೆ ಅನೇಕ ಭಕ್ತರು ಭಾಗಿಯಾಗಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!