ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯ ಮಹೋತ್ಸವದಲ್ಲಿ ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯದ ಪೂರ್ವಭಾವಿಯಾಗಿ “ಕಟ್ಟಿಗೆ ಮುಹೂರ್ತವು” ಶ್ರೀಕೃಷ್ಣ ಮಠದ ಪರಿಸರದಲ್ಲಿ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರೊಂದಿಗೆ ಪ್ರಸ್ತುತ ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗು ಕಿರಿಯ ಯತಿ ಸುಶೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿದ್ರು. ಶ್ರೀರೂರು ಮಠದ ದಿವಾನರಾದ ಡಾ.ಉದಯಕುಮಾರ ಸರಳತ್ತಾಯರ ನೇತೃತ್ವದಲ್ಲಿ ಪುರೋಹಿತರಾದ ಗಿರಿರಾಜ ಉಪಾಧ್ಯಾಯರು ಶ್ರೀರೂರು ಮಠದ ಶ್ರೀವಿಠ್ಠಲ ದೇವರು, ಶ್ರೀಚಂದ್ರೇಶ್ವರ ದೇವರು, ಶ್ರೀಅನಂತೇಶ್ವರ, ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿತು. ನಂತರ ಮಠದ ಕಲ್ಸಂಕ ಲಕ್ಷ್ಮೀ ತೋಟದಿಂದ ಕಟ್ಟಿಗೆಯನ್ನು ಎತ್ತಿನಗಾಡಿ ಹಾಗೂ ಕೈಗಾಡಿಯಲ್ಲಿ ಮತ್ತು ಭಕ್ತರು ಕೈಯಲ್ಲಿ ಹಿಡಿದುಕೊಂಡು ಮೆರವಣಿಗೆಯಲ್ಲಿ ತರಲಾಯಿತು. ಈ ಕಾರ್ಯಕ್ರಮದಲ್ಲಿ ಶಾಸಕರು ಸೇರಿದಂತೆ ಅನೇಕ ಭಕ್ತರು ಭಾಗಿಯಾಗಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…