ದೇಶದಲ್ಲಿ ಉದ್ಯೋಗಾವಕಾಶ ಹಾಗೂ ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲು ಹಾಗೂ ಎಲ್ಲಾ ವಲಯಗಳಲ್ಲಿ ಉದ್ಯೋಗ ಸೃಷ್ಟಿಯನ್ನು ಬೆಂಬಲಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರಕಾರ ಉತ್ಪಾದನಾ ವಲಯದ ಮೂಲಕ ಉದ್ಯೋಗ ಸಂಬಂಧಿತ ಪ್ರೋತ್ಸಾಹಕ ಯೋಜನೆಯ ಅನುಷ್ಠಾನಕ್ಕೆ ಅನುಮೋದನೆ ನೀಡಿದೆ ಎಂದು ಭವಿಷ್ಯ ನಿಧಿ ಸಂಘಟನೆಯ ಉಡುಪಿ ಪ್ರಾದೇಶಿಕ ಕಚೇರಿಯ ಭವಿಷ್ಯನಿಧಿ ಆಯುಕ್ತ ಶಶಿಕಾಂತ್ ದಹಿಯಾ ತಿಳಿಸಿದ್ದಾರೆ.
ಉಡುಪಿಯ ಪಿಎಫ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಈ ಯೋಜನೆ ಇದೇ ಬರುವ ಆಗಸ್ಟ್ ತಿಂಗಳ ಮೊದಲ ದಿನದಿಂದ ದೇಶಾದ್ಯಂತ ಜಾರಿ ಗೊಳ್ಳಲಿದೆ. ಆ.1ರಿಂದ ಹೊಸದಾಗಿ ಉದ್ಯೋಗ ಪಡೆಯುವವರಿಗೆ ಎರಡು ವರ್ಷಗಳ ಅವಧಿಗೆ ಹಾಗೂ ಉದ್ಯೋಗದಾತರಿಗೆ ಇನ್ನೂ ಎರಡು ಹೆಚ್ಚುವರಿ ವರ್ಷಗಳಿಗೆ ಇದು ಅನ್ವಯಿಸಲಿದೆ ಎಂದ್ರು. ಈ ಯೋಜನೆಯ ಪ್ರಯೋಜನಗಳು 2025ರ ಆಗಸ್ಟ್ 01ರಿಂದ 2027ರ ಜುಲೈ 31ರ ನಡುವೆ ಸೃಷ್ಟಿಯಾದ ಉದ್ಯೋಗಗಳಿಗೆ ಅನ್ವಯವಾಗುತ್ತವೆ. ಈ ಯೋಜನೆಯಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಿಗಳು ಒಂದು ತಿಂಗಳ ವೇತನವನ್ನು ಪಡೆಯುತ್ತಾರೆ. ಹೆಚ್ಚುವರಿ ಉದ್ಯೋಗ ಸೃಷ್ಟಿಸಲು ಉದ್ಯೋಗದಾತರಿಗೆ ಒಂದು ಅವಧಿಯಿಂದ ಎರಡು ವರ್ಷಗಳವರೆಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಉತ್ಪಾದನಾ ವಲಯಕ್ಕೆ ಇನ್ನೂ ಎರಡು ವರ್ಷಗಳವರೆಗೆ ವಿಸ್ತೃತ ಪ್ರಯೋಜನ ನೀಡಲಾಗುತ್ತದೆ ಎಂದು ಪರಿವರ್ತನಾಧಿಕಾರಿ ಸುನಿಲ್ರಾವ್ ವಿವರಿಸಿದ್ರು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…