ಜನ ಮನದ ನಾಡಿ ಮಿಡಿತ

Advertisement

ಶುಭಾಂಶು ಶುಕ್ಲಾ ಜೊತೆ ನಾಲ್ವರು ಗಗನಯಾತ್ರಿಗಳೂ ಭೂಮಿಗೆ ಸೇಫ್ ಲ್ಯಾಂಡ್

ಜೂನ್ 25 ರಂದು ಬಾಹ್ಯಾಕಾಶಕ್ಕೆ ಹಾರಿದ್ದ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆಗಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕ್ಯಾಲಿಫೋರ್ನಿಯಾದ ಕರಾವಳಿಗೆ ಸ್ಪ್ಲ್ಯಾಶ್‌ಡೌನ್ ಆಗಿದ್ದಾರೆ. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್‌ನ ಉಜಾಂನ್ಸಿ, ಹಂಗೇರಿಯ ಟಿಬೊರ್ ಕಾಪುಗೆ ಅವರು ಆಕ್ಸಿಯೋಂ-4 ಮಿಷನ್ ಭಾಗವಾಗಿ ಐಎಸ್‌ಎಸ್ ತೆರಳಿದ್ದರು. ಜೂನ್ 25ರ ಬುಧವಾರ ಅಂತರಿಕ್ಷಯಾನ ಹೊರಟಿದ್ದ ಯಾತ್ರಿಗಳು, 26ರಂದು ಬಾಹ್ಯಾಕಾಶ ನಿಲ್ದಾಣ ತಲುಪಿದ್ದರು. ಲ್ಯಾಂಡಿ0ಗ್ ಬಳಿಕ ಪುನಶ್ಚೇತನ ಕಾರ್ಯಕ್ರಮ ಇದೆ. ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು ಅನುವಾಗುವಂತೆ 7 ದಿನಗಳ ಪುನಶ್ಚತನಕ್ಕೆ ಒಳಪಡಲಿದ್ದಾರೆ. ಒಟ್ಟಾರೆ ಬಾಹ್ಯಾಕಾಶ ಚರಿತ್ರೆಯಲ್ಲಿ ಭಾರತದ ಹೊಸ ಮೈಲಿಗಲ್ಲು ಸ್ಥಾಪಿಸಿ ಆಗಿದೆ.

ಆಗಸದಲ್ಲಿ ಶುಭಾರಂಭ ಅಂತರಿಕ್ಷ ಯಾನ ಅಂತ್ಯವಾಗಿದೆ. ಗಗನದಿಂದ ಭಾರತವನ್ನು ಸಾರೆ ಜಹಾಂಸೆ ಅಚ್ಛಾ ಅಂತ ಶುಕ್ಲಾ ಬಣ್ಣಿಸಿದ್ದರು. ಭಾರತದ ಪರವಾಗಿ ಶುಭಾಂಶು ಶುಕ್ಲಾ ಒಟ್ಟು 7 ವಿವಿಧ ಪ್ರಯೋಗ ಮಾಡಿದ್ದಾರೆ. ವಿಶೇಷ ಅಂದರೆ ಶುಕ್ಲಾ ನಡೆಸುವ 7 ಪ್ರಯೋಗಗಳ ಪೈಕಿ ಕರ್ನಾಟಕದ್ದೇ 4 ಪ್ರಯೋಗ ಇದೆ. ಕರ್ನಾಟಕದ ಅಧ್ಯಯನ ಸಂಸ್ಥೆಗಳು ರೂಪಿಸಿರುವ 4 ಪ್ರಯೋಗಗಳನ್ನ ನಡೆಸಿದ್ದಾರೆ. ಜೊತೆಗೆ ದೆಹಲಿಯ 2 ಪ್ರಯೋಗ, ಕೇರಳದ 1 ಪ್ರಯೋಗ ಸಂಬ0ಧ ಅಧ್ಯಯನ ನಡೆದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!