ಜೂನ್ 25 ರಂದು ಬಾಹ್ಯಾಕಾಶಕ್ಕೆ ಹಾರಿದ್ದ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆಗಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕ್ಯಾಲಿಫೋರ್ನಿಯಾದ ಕರಾವಳಿಗೆ ಸ್ಪ್ಲ್ಯಾಶ್ಡೌನ್ ಆಗಿದ್ದಾರೆ. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್ನ ಉಜಾಂನ್ಸಿ, ಹಂಗೇರಿಯ ಟಿಬೊರ್ ಕಾಪುಗೆ ಅವರು ಆಕ್ಸಿಯೋಂ-4 ಮಿಷನ್ ಭಾಗವಾಗಿ ಐಎಸ್ಎಸ್ ತೆರಳಿದ್ದರು. ಜೂನ್ 25ರ ಬುಧವಾರ ಅಂತರಿಕ್ಷಯಾನ ಹೊರಟಿದ್ದ ಯಾತ್ರಿಗಳು, 26ರಂದು ಬಾಹ್ಯಾಕಾಶ ನಿಲ್ದಾಣ ತಲುಪಿದ್ದರು. ಲ್ಯಾಂಡಿ0ಗ್ ಬಳಿಕ ಪುನಶ್ಚೇತನ ಕಾರ್ಯಕ್ರಮ ಇದೆ. ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು ಅನುವಾಗುವಂತೆ 7 ದಿನಗಳ ಪುನಶ್ಚತನಕ್ಕೆ ಒಳಪಡಲಿದ್ದಾರೆ. ಒಟ್ಟಾರೆ ಬಾಹ್ಯಾಕಾಶ ಚರಿತ್ರೆಯಲ್ಲಿ ಭಾರತದ ಹೊಸ ಮೈಲಿಗಲ್ಲು ಸ್ಥಾಪಿಸಿ ಆಗಿದೆ.
ಆಗಸದಲ್ಲಿ ಶುಭಾರಂಭ ಅಂತರಿಕ್ಷ ಯಾನ ಅಂತ್ಯವಾಗಿದೆ. ಗಗನದಿಂದ ಭಾರತವನ್ನು ಸಾರೆ ಜಹಾಂಸೆ ಅಚ್ಛಾ ಅಂತ ಶುಕ್ಲಾ ಬಣ್ಣಿಸಿದ್ದರು. ಭಾರತದ ಪರವಾಗಿ ಶುಭಾಂಶು ಶುಕ್ಲಾ ಒಟ್ಟು 7 ವಿವಿಧ ಪ್ರಯೋಗ ಮಾಡಿದ್ದಾರೆ. ವಿಶೇಷ ಅಂದರೆ ಶುಕ್ಲಾ ನಡೆಸುವ 7 ಪ್ರಯೋಗಗಳ ಪೈಕಿ ಕರ್ನಾಟಕದ್ದೇ 4 ಪ್ರಯೋಗ ಇದೆ. ಕರ್ನಾಟಕದ ಅಧ್ಯಯನ ಸಂಸ್ಥೆಗಳು ರೂಪಿಸಿರುವ 4 ಪ್ರಯೋಗಗಳನ್ನ ನಡೆಸಿದ್ದಾರೆ. ಜೊತೆಗೆ ದೆಹಲಿಯ 2 ಪ್ರಯೋಗ, ಕೇರಳದ 1 ಪ್ರಯೋಗ ಸಂಬ0ಧ ಅಧ್ಯಯನ ನಡೆದಿದೆ.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…