ಜೂನ್ 25 ರಂದು ಬಾಹ್ಯಾಕಾಶಕ್ಕೆ ಹಾರಿದ್ದ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆಗಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕ್ಯಾಲಿಫೋರ್ನಿಯಾದ ಕರಾವಳಿಗೆ ಸ್ಪ್ಲ್ಯಾಶ್ಡೌನ್ ಆಗಿದ್ದಾರೆ. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್ನ ಉಜಾಂನ್ಸಿ, ಹಂಗೇರಿಯ ಟಿಬೊರ್ ಕಾಪುಗೆ ಅವರು ಆಕ್ಸಿಯೋಂ-4 ಮಿಷನ್ ಭಾಗವಾಗಿ ಐಎಸ್ಎಸ್ ತೆರಳಿದ್ದರು. ಜೂನ್ 25ರ ಬುಧವಾರ ಅಂತರಿಕ್ಷಯಾನ ಹೊರಟಿದ್ದ ಯಾತ್ರಿಗಳು, 26ರಂದು ಬಾಹ್ಯಾಕಾಶ ನಿಲ್ದಾಣ ತಲುಪಿದ್ದರು. ಲ್ಯಾಂಡಿ0ಗ್ ಬಳಿಕ ಪುನಶ್ಚೇತನ ಕಾರ್ಯಕ್ರಮ ಇದೆ. ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು ಅನುವಾಗುವಂತೆ 7 ದಿನಗಳ ಪುನಶ್ಚತನಕ್ಕೆ ಒಳಪಡಲಿದ್ದಾರೆ. ಒಟ್ಟಾರೆ ಬಾಹ್ಯಾಕಾಶ ಚರಿತ್ರೆಯಲ್ಲಿ ಭಾರತದ ಹೊಸ ಮೈಲಿಗಲ್ಲು ಸ್ಥಾಪಿಸಿ ಆಗಿದೆ.
ಆಗಸದಲ್ಲಿ ಶುಭಾರಂಭ ಅಂತರಿಕ್ಷ ಯಾನ ಅಂತ್ಯವಾಗಿದೆ. ಗಗನದಿಂದ ಭಾರತವನ್ನು ಸಾರೆ ಜಹಾಂಸೆ ಅಚ್ಛಾ ಅಂತ ಶುಕ್ಲಾ ಬಣ್ಣಿಸಿದ್ದರು. ಭಾರತದ ಪರವಾಗಿ ಶುಭಾಂಶು ಶುಕ್ಲಾ ಒಟ್ಟು 7 ವಿವಿಧ ಪ್ರಯೋಗ ಮಾಡಿದ್ದಾರೆ. ವಿಶೇಷ ಅಂದರೆ ಶುಕ್ಲಾ ನಡೆಸುವ 7 ಪ್ರಯೋಗಗಳ ಪೈಕಿ ಕರ್ನಾಟಕದ್ದೇ 4 ಪ್ರಯೋಗ ಇದೆ. ಕರ್ನಾಟಕದ ಅಧ್ಯಯನ ಸಂಸ್ಥೆಗಳು ರೂಪಿಸಿರುವ 4 ಪ್ರಯೋಗಗಳನ್ನ ನಡೆಸಿದ್ದಾರೆ. ಜೊತೆಗೆ ದೆಹಲಿಯ 2 ಪ್ರಯೋಗ, ಕೇರಳದ 1 ಪ್ರಯೋಗ ಸಂಬ0ಧ ಅಧ್ಯಯನ ನಡೆದಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…