ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಸಾಧ್ಯತೆಯಿರುವ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆ, ಜುಲೈ 18ರವರೆಗೆ ಜಿಲ್ಲೆಯ ಎಲ್ಲಾ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ತಿಳಿಸಲಾಗಿದೆ. ಸಾಂಪ್ರದಾಯಿಕ ಮೀನುಗಾರರು ಸಮುದ್ರ ದಡದಲ್ಲಿ ನಿಲ್ಲಿಸಿಟ್ಟಿರುವ ದೋಣಿ ಮತ್ತು ಬಲೆಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಸಣ್ಣ ಮತ್ತು ಮಧ್ಯಮ ದೋಣಿಗಳು ಮೀನುಗಾರಿಕೆಗೆ ತೆರಳದಂತೆ ಹಾಗೂ ಮುಂದಿನ ದಿನಗಳಲ್ಲಿ ಮೀನುಗಾರಿಕೆಗೆ ತೆರಳುವಾಗ ಕಡ್ಡಾಯವಾಗಿ ಜೀವರಕ್ಷಕ ಸಾಧನಗಳನ್ನು ಬಳಸಿ ಸುರಕ್ಷಿತ ಮೀನುಗಾರಿಕೆಯನ್ನು ಕೈಗೊಳ್ಳುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…